<p><strong>ಮುಳಬಾಗಿಲು</strong>: ದರಖಾಸ್ತು ಯೋಜನೆಯಡಿ ಕೃಷಿ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದವರ ಫಲಾನುಭವಿಗಳು ಉಳುಮೆ ಮಾಡುತ್ತಿರುವ ಜಮೀನುಗಳಿಗೆ ಶಾಸಕ ಸಮೃದ್ಧಿ ಮಂಜುನಾಥ್, ತಹಶೀಲ್ದಾರ್ ವಿ. ಗೀತಾ ಮತ್ತು ದರಖಾಸ್ತು ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಶನಿವಾರ ಖುದ್ದಾಗಿ ಭೇಟಿ ನೀಡಿದರು.</p>.<p>ರಾಮೇನಲ್ಲೂರು, ಮಜರಾ ಅತ್ತಿಕುಂಟೆ, ರಾಮರಾಯನಕೋಟೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಜಮೀನು ಉಳುಮೆ ಮಾಡುತ್ತಿರುವ ಜಮೀನುಗಳಿಗೆ ಈ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. </p>.<p>ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ಈ ಹಿಂದಿನ ಅವಧಿಯಲ್ಲಿನ ಸಾಗುವಳಿ ಚೀಟಿಗಳ ವಿತರಣೆಯಲ್ಲಿ ಅವ್ಯವಹಾರ ನಡೆದಿದ್ದು, ಬಲಾಢ್ಯರು ಲಜಮೀನುಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ. ಇದೀಗ ಜಮೀನುರಹಿತ ಬಡ ರೈತರಿಗೆ ಅನುಕೂಲ ಕಲ್ಪಿಸಲು ಸರ್ಕಾರದ ನಿಯಮ ಪ್ರಕಾರ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು. </p>.<p>ತಾಲ್ಲೂಕಿನ 160 ಅರ್ಹ ಫಲಾನುಭವಿಗಳಿಗೆ ಒಂದು ತಿಂಗಳಿನಲ್ಲಿ ಸಾಗುವಳಿ ಚೀಟಿ ವಿತರಿಸಲಾಗುವುದು. ಈ ವಿಷಯದಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು. </p>.<p>ದರಖಾಸ್ತು ಸಮಿತಿ ಸದಸ್ಯ ಗುಜ್ಜನಹಳ್ಳಿ ಮಂಜುನಾಥ್ ಹಾಗೂ ಜಮ್ಮನಹಳ್ಳಿ ಕೃಷ್ಣಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಜಮೀನು ಇಲ್ಲದ ಬಡ ರೈತರನ್ನು ಗುರುತಿಸಲು ಖುದ್ದಾಗಿ ಜಮೀನುಗಳಿಗೆ ಭೇಟಿ ನೀಡಿದ್ದೇವೆ. ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ ಎಂದರು. </p>.<p>ತಹಶೀಲ್ದಾರ್ ವಿ. ಗೀತಾ. ದರಖಾಸ್ತು ಸಮಿತಿ ಸದಸ್ಯರಾದ ನೀಲಾವತಿ, ಜಮ್ಮನಹಳ್ಳಿ ಕೃಷ್ಣಪ್ಪ, ಗುಜ್ಜನಹಳ್ಳಿ ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ರಘುಪತಿ ರೆಡ್ಡಿ, ಲಕ್ಷ್ಮಿನಾರಾಯಣ್, ಉಪ ತಹಶೀಲ್ದಾರ್ ಸುಬ್ರಮಣಿ, ಗ್ರಾಮ ಲೆಕ್ಕಾಧಿಕಾರಿ ಕಾವ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ದರಖಾಸ್ತು ಯೋಜನೆಯಡಿ ಕೃಷಿ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದವರ ಫಲಾನುಭವಿಗಳು ಉಳುಮೆ ಮಾಡುತ್ತಿರುವ ಜಮೀನುಗಳಿಗೆ ಶಾಸಕ ಸಮೃದ್ಧಿ ಮಂಜುನಾಥ್, ತಹಶೀಲ್ದಾರ್ ವಿ. ಗೀತಾ ಮತ್ತು ದರಖಾಸ್ತು ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಶನಿವಾರ ಖುದ್ದಾಗಿ ಭೇಟಿ ನೀಡಿದರು.</p>.<p>ರಾಮೇನಲ್ಲೂರು, ಮಜರಾ ಅತ್ತಿಕುಂಟೆ, ರಾಮರಾಯನಕೋಟೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಜಮೀನು ಉಳುಮೆ ಮಾಡುತ್ತಿರುವ ಜಮೀನುಗಳಿಗೆ ಈ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. </p>.<p>ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ಈ ಹಿಂದಿನ ಅವಧಿಯಲ್ಲಿನ ಸಾಗುವಳಿ ಚೀಟಿಗಳ ವಿತರಣೆಯಲ್ಲಿ ಅವ್ಯವಹಾರ ನಡೆದಿದ್ದು, ಬಲಾಢ್ಯರು ಲಜಮೀನುಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ. ಇದೀಗ ಜಮೀನುರಹಿತ ಬಡ ರೈತರಿಗೆ ಅನುಕೂಲ ಕಲ್ಪಿಸಲು ಸರ್ಕಾರದ ನಿಯಮ ಪ್ರಕಾರ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು. </p>.<p>ತಾಲ್ಲೂಕಿನ 160 ಅರ್ಹ ಫಲಾನುಭವಿಗಳಿಗೆ ಒಂದು ತಿಂಗಳಿನಲ್ಲಿ ಸಾಗುವಳಿ ಚೀಟಿ ವಿತರಿಸಲಾಗುವುದು. ಈ ವಿಷಯದಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು. </p>.<p>ದರಖಾಸ್ತು ಸಮಿತಿ ಸದಸ್ಯ ಗುಜ್ಜನಹಳ್ಳಿ ಮಂಜುನಾಥ್ ಹಾಗೂ ಜಮ್ಮನಹಳ್ಳಿ ಕೃಷ್ಣಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಜಮೀನು ಇಲ್ಲದ ಬಡ ರೈತರನ್ನು ಗುರುತಿಸಲು ಖುದ್ದಾಗಿ ಜಮೀನುಗಳಿಗೆ ಭೇಟಿ ನೀಡಿದ್ದೇವೆ. ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ ಎಂದರು. </p>.<p>ತಹಶೀಲ್ದಾರ್ ವಿ. ಗೀತಾ. ದರಖಾಸ್ತು ಸಮಿತಿ ಸದಸ್ಯರಾದ ನೀಲಾವತಿ, ಜಮ್ಮನಹಳ್ಳಿ ಕೃಷ್ಣಪ್ಪ, ಗುಜ್ಜನಹಳ್ಳಿ ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ರಘುಪತಿ ರೆಡ್ಡಿ, ಲಕ್ಷ್ಮಿನಾರಾಯಣ್, ಉಪ ತಹಶೀಲ್ದಾರ್ ಸುಬ್ರಮಣಿ, ಗ್ರಾಮ ಲೆಕ್ಕಾಧಿಕಾರಿ ಕಾವ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>