<p><strong>ಮುಳಬಾಗಿಲು:</strong> ಪೋಷಕರು ಹಾಗೂ ಶಿಕ್ಷಕರಿಂದ ಉತ್ತಮ ನೈತಿಕ ಮೌಲ್ಯಗಳನ್ನು ಕಲಿತು ಜೀವನದಲ್ಲಿ ರೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬಹುದು ಎಂದು ಗ್ರಾಮ ಪಂಚಾಯತಿ ಸರ್ವ ಸದಸ್ಯರ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಪೆತ್ತಾಂಡ್ಲಹಳ್ಳಿ ಪಿ.ವಿ.ಶಂಕರ್ ಹೇಳಿದರು.</p>.<p>ತಾಲ್ಲೂಕಿನ ಬೈರಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ನಡೆದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಆಟ, ಪಾಠ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಡಗೊಳ್ಳಲಿದೆ ಎಂದು ತಿಳಿಸಿದರು.</p>.<p>ಮಕ್ಕಳು ಯಾವುದೇ ಕಾರಣಕ್ಕೂ ಮೊಬೈಲ್ ಬಳಸಬಾರದು. ಮೊಬೈಲಿಂದ ನಿಮ್ಮ ಓದಿಗೆ ಆಡಚಣೆ ಉಂಟಾಗಿ ವಿದ್ಯಾಭ್ಯಾಸ ಕುಂಠಿತವಾಗಲಿದೆ. ಈ ಹಿಂದೆ ಮಕ್ಕಳು ದೂರದರ್ಶನ ನೋಡಲೂ ಸಹ ಪೋಷಕರು ಬಿಡುತ್ತಿರಲಿಲ್ಲ.ಆದರೆ ಇಂದು ಮಕ್ಕಳು ಮೊಬೈಲು ಕೊಡದೆ ಇದ್ದರೆ ಊಟಾನೂ ಮಾಡಲ್ಲ ಅಂತಹ ಕ್ಲಿಷ್ಟ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.</p>.<p>ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ಮುಖ್ಯ ಕರ್ತವ್ಯ ಆಗಬೇಕು. ಶಾಲಾ ಹಂತದಿಂದಲೇ</p>.<p>ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕೆಲಸ ನಡೆಯಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ವಿವಿಧ ಬಗೆಯ ವೇಷ ಭೂಷಣಗಳನ್ನು ತೊಟ್ಟು ರಂಜಿಸಿದರು.</p>.<p>ಪಿ.ಎನ್.ಲಕ್ಷ್ಮೀನಾರಾಯಣ ಚಾರಿ, ಸಿಆರ್ಪಿ ವರದರಾಜು, ಗ್ರಾಮ ಪಂಚಾಯತಿ ಸದಸ್ಯ ಸುರೇಂದ್ರಬಾಬು ನಾಯ್ಡು, ಸುಮಲತಾ ಸುಬ್ರಮಣಿ, ಬೈರಕೂರು ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ಪೋಷಕರು ಹಾಗೂ ಶಿಕ್ಷಕರಿಂದ ಉತ್ತಮ ನೈತಿಕ ಮೌಲ್ಯಗಳನ್ನು ಕಲಿತು ಜೀವನದಲ್ಲಿ ರೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬಹುದು ಎಂದು ಗ್ರಾಮ ಪಂಚಾಯತಿ ಸರ್ವ ಸದಸ್ಯರ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಪೆತ್ತಾಂಡ್ಲಹಳ್ಳಿ ಪಿ.ವಿ.ಶಂಕರ್ ಹೇಳಿದರು.</p>.<p>ತಾಲ್ಲೂಕಿನ ಬೈರಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ನಡೆದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಆಟ, ಪಾಠ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಡಗೊಳ್ಳಲಿದೆ ಎಂದು ತಿಳಿಸಿದರು.</p>.<p>ಮಕ್ಕಳು ಯಾವುದೇ ಕಾರಣಕ್ಕೂ ಮೊಬೈಲ್ ಬಳಸಬಾರದು. ಮೊಬೈಲಿಂದ ನಿಮ್ಮ ಓದಿಗೆ ಆಡಚಣೆ ಉಂಟಾಗಿ ವಿದ್ಯಾಭ್ಯಾಸ ಕುಂಠಿತವಾಗಲಿದೆ. ಈ ಹಿಂದೆ ಮಕ್ಕಳು ದೂರದರ್ಶನ ನೋಡಲೂ ಸಹ ಪೋಷಕರು ಬಿಡುತ್ತಿರಲಿಲ್ಲ.ಆದರೆ ಇಂದು ಮಕ್ಕಳು ಮೊಬೈಲು ಕೊಡದೆ ಇದ್ದರೆ ಊಟಾನೂ ಮಾಡಲ್ಲ ಅಂತಹ ಕ್ಲಿಷ್ಟ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.</p>.<p>ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ಮುಖ್ಯ ಕರ್ತವ್ಯ ಆಗಬೇಕು. ಶಾಲಾ ಹಂತದಿಂದಲೇ</p>.<p>ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕೆಲಸ ನಡೆಯಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ವಿವಿಧ ಬಗೆಯ ವೇಷ ಭೂಷಣಗಳನ್ನು ತೊಟ್ಟು ರಂಜಿಸಿದರು.</p>.<p>ಪಿ.ಎನ್.ಲಕ್ಷ್ಮೀನಾರಾಯಣ ಚಾರಿ, ಸಿಆರ್ಪಿ ವರದರಾಜು, ಗ್ರಾಮ ಪಂಚಾಯತಿ ಸದಸ್ಯ ಸುರೇಂದ್ರಬಾಬು ನಾಯ್ಡು, ಸುಮಲತಾ ಸುಬ್ರಮಣಿ, ಬೈರಕೂರು ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>