ಮುಳಬಾಗಿಲು: ತಾಲ್ಲೂಕಿನ ಕಸಬಾ ಹೋಬಳಿ ಯಲವಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ವೇಳೆಗೆ ಬಾಳೆತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ನಷ್ಟವಾಗಿದೆ.
ಗ್ರಾಮದ ಅಶೋಕ್ಕುಮಾರ್ ಎಂಬುವವರು ಲಕ್ಷಾಂತರ ರೂಪಾಯಿ ವ್ಯಯಿಸಿ ಐದು ಎಕರೆಯಲ್ಲಿ ಬಾಳೆ ಬೆಳೆದಿದ್ದರು.
ಬೆಂಕಿ ನಂದಿಸಲು ಅಗ್ನಿಶಾಮಕ ದಳಕ್ಕೆ ಕರೆ ಮಾಡಲು ಪ್ರಯತ್ನಿಸಿದರೂ, ಸಂಪರ್ಕ ಸಾಧ್ಯವಾಗಲಿಲ್ಲ. ಗ್ರಾಮಸ್ಥರೇ ಟ್ಯಾಂಕರ್ಗಳಲ್ಲಿ ನೀರು ತಂದು ಸುರಿದರು. ಶೇ 90ಕ್ಕೂ ಹೆಚ್ಚಿನ ಬೆಳೆ ಬೆಂಕಿಗೆ ಆಹುತಿಯಾಗಿದೆ ಎಂದು ಗ್ರಾಮದ ಪ್ರಭಾಕರ್ ತಿಳಿಸಿದರು.