<p><strong>ಮುಳಬಾಗಿಲು</strong>: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರಿಗಾಗಿ ನಗರದಲ್ಲಿ ಭಾನುವಾರ ನಡೆದ ಚುನಾವಣೆ ಶಾಂತಿಯುತವಾಗಿತ್ತು. </p>.<p>ಒಟ್ಟು 14 ಸ್ಥಾನಗಳ ಪೈಕಿ 6 ಕ್ಷೇತ್ರಗಳಿಗೆ ಅವಿರೋಧ ಆಯ್ಕೆ ನಡೆಯಿತು. ಉಳಿದ 8 ಸ್ಥಾನಗಳಿಗೆ ನಗರದ ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ಚುನಾವಣೆ ನಡೆಯಿತು. ಬಿ.ಆರ್.ಶಿವಶಂಕರ್ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.</p>.<p>ಚುನಾವಣೆಯಲ್ಲಿ ತಾಲ್ಲೂಕು ಸಾಲಗಾರರಲ್ಲದ ಕ್ಷೇತ್ರದಿಂದ ಮಂಡಿಕಲ್ ಎಂ.ಎಸ್.ಮಂಜುನಾಥ್, ಆಲಂಗೂರು ಕ್ಷೇತ್ರದಿಂದ ಎ.ಭರತ್, ನಂಗಲಿ ಬಿಸಿಎಂ– ಬಿ ಕ್ಷೇತ್ರದಿಂದ ಟಿ.ವಿಶ್ವನಾಥ ರೆಡ್ಡಿ, ಬೈರಕೂರು ಸಾಮಾನ್ಯ ಕ್ಷೇತ್ರದಿಂದ ಕೆ.ಎಸ್.ಅಶೋಕ್, ಅಂಬ್ಲಿಕಲ್ ಕ್ಷೇತ್ರದಿಂದ ಗಂಗಿರೆಡ್ಡಿ, ತಾಯಲೂರಿನಿಂದ ಶ್ರೀನಿವಾಸ್ , ಆವಣಿಯಿಂದ ಎಂ.ಎನ್.ಶಂಕರ ನಾರಾಯಣ ಮತ್ತು ಬಲ್ಲ ಕ್ಷೇತ್ರದಿಂದ ಕೆಂಪಮ್ಮ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. </p>.<p>ಭಾನುವಾರ ಬೆಳಿಗ್ಗೆಯಿಂದಲೇ ಸುರಿಯುತ್ತಿದ್ದ ಜಡಿ ಮಳೆಯನ್ನೂ ಲೆಕ್ಕಿಸದೆ ಅಭ್ಯರ್ಥಿಗಳು ಮತ್ತು ವಿವಿಧ ಮುಖಂಡರು ಮತದಾರರ ಓಲೈಸುವಲ್ಲಿ ನಿರತರಾಗಿರುವುದು ಕಂಡುಬಂದಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರಿಗಾಗಿ ನಗರದಲ್ಲಿ ಭಾನುವಾರ ನಡೆದ ಚುನಾವಣೆ ಶಾಂತಿಯುತವಾಗಿತ್ತು. </p>.<p>ಒಟ್ಟು 14 ಸ್ಥಾನಗಳ ಪೈಕಿ 6 ಕ್ಷೇತ್ರಗಳಿಗೆ ಅವಿರೋಧ ಆಯ್ಕೆ ನಡೆಯಿತು. ಉಳಿದ 8 ಸ್ಥಾನಗಳಿಗೆ ನಗರದ ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ಚುನಾವಣೆ ನಡೆಯಿತು. ಬಿ.ಆರ್.ಶಿವಶಂಕರ್ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.</p>.<p>ಚುನಾವಣೆಯಲ್ಲಿ ತಾಲ್ಲೂಕು ಸಾಲಗಾರರಲ್ಲದ ಕ್ಷೇತ್ರದಿಂದ ಮಂಡಿಕಲ್ ಎಂ.ಎಸ್.ಮಂಜುನಾಥ್, ಆಲಂಗೂರು ಕ್ಷೇತ್ರದಿಂದ ಎ.ಭರತ್, ನಂಗಲಿ ಬಿಸಿಎಂ– ಬಿ ಕ್ಷೇತ್ರದಿಂದ ಟಿ.ವಿಶ್ವನಾಥ ರೆಡ್ಡಿ, ಬೈರಕೂರು ಸಾಮಾನ್ಯ ಕ್ಷೇತ್ರದಿಂದ ಕೆ.ಎಸ್.ಅಶೋಕ್, ಅಂಬ್ಲಿಕಲ್ ಕ್ಷೇತ್ರದಿಂದ ಗಂಗಿರೆಡ್ಡಿ, ತಾಯಲೂರಿನಿಂದ ಶ್ರೀನಿವಾಸ್ , ಆವಣಿಯಿಂದ ಎಂ.ಎನ್.ಶಂಕರ ನಾರಾಯಣ ಮತ್ತು ಬಲ್ಲ ಕ್ಷೇತ್ರದಿಂದ ಕೆಂಪಮ್ಮ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. </p>.<p>ಭಾನುವಾರ ಬೆಳಿಗ್ಗೆಯಿಂದಲೇ ಸುರಿಯುತ್ತಿದ್ದ ಜಡಿ ಮಳೆಯನ್ನೂ ಲೆಕ್ಕಿಸದೆ ಅಭ್ಯರ್ಥಿಗಳು ಮತ್ತು ವಿವಿಧ ಮುಖಂಡರು ಮತದಾರರ ಓಲೈಸುವಲ್ಲಿ ನಿರತರಾಗಿರುವುದು ಕಂಡುಬಂದಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>