<p><strong>ಮುಳಬಾಗಿಲು:</strong> ನಗರದಲ್ಲಿ ಭಾನುವಾರ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ 150 ಉತ್ತಮ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. </p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಮೋಹನ್ ಬಾಬು ಮಾತನಾಡಿ, ‘ಸಾವಿತ್ರಿಬಾಯಿ ಫುಲೆ ಅವರಂಥ ಮಹನೀಯರಿಂದಾಗಿ ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ಸಿಗುತ್ತಿದೆ’ ಎಂದು ಹೇಳಿದರು. </p>.<p>ಸಮಾಜದಲ್ಲಿ ಕಡ್ಡಾಯವಾಗಿ 6 ವರ್ಷದ ಮೀರಿದ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು ಎಂಬ ನೀತಿ ಜಾರಿಯಲ್ಲಿದೆ. ಅದರಂತೆ ಸಂವಿಧಾನದ 21 ಎ ನಲ್ಲಿ ಎಲ್ಲರೂ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕು ಆಗಿದೆ. ಹೀಗಾಗಿ, ಎಲ್ಲ ಮಕ್ಕಳು ತಪ್ಪದೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದರು. </p>.<p>ಎಂ.ಗೊಲ್ಲಹಳ್ಳಿ ಪ್ರಭಾಕರ್ ಮಾತನಾಡಿ, ಅನಾದಿಕಾಲದಿಂದ ಮಹಿಳೆಯರಿಗೆ ಶಿಕ್ಷಣದಲ್ಲಿ ಉತ್ತಮ ಸ್ಥಾನಮಾನ ಸಿಕ್ಕಿರಲಿಲ್ಲ. ಸಾವಿತ್ರಿಬಾಯಿ ಫುಲೆ ಅವರು ಹೆಣ್ಣು ಮಕ್ಕಳಿಗಾಗಿ ಶಾಲೆ ತೆರೆದರು. ತನ್ನ ಪತಿ ಜ್ಯೋತಿ ಬಾಫುಲೆ ಸಹಕರಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರು ಎಂದರು. </p>.<p>ಈ ಮೂಲಕ ದೇಶದ ಮೊಟ್ಟ ಮೊದಲ ಶಿಕ್ಷಕಿಯಾಗಿ, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತನ್ನ ಜೀವನ ಮುಡುಪಾಗಿಟ್ಟರು. ಇವರ ಆದರ್ಶಗಳು ನಮಗೆ ಸ್ಫೂರ್ತಿದಾಯಕವಾಗಿದ್ದು, ಪುರುಷರಷ್ಟೇ ಮಹಿಳೆಯರೂ ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದರು. </p>.<p>ವಕೀಲ ಶ್ರೀನಿವಾಸ್ ರೆಡ್ಡಿ ಮಾತನಾಡಿದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಅರವಿಂದ್, ಕ್ಷೇತ್ರ ಸಮನ್ವಯ ಅಧಿಕಾರಿ ಪಿ. ಸೋಮೇಶ್, ವೆಂಕಟಗಿರಿಯಪ್ಪ, ರಹೀಂ ಶರೀಫ್ , ತ. ಸೊಣ್ಣಪ್ಪ, ಓಬಳ ರೆಡ್ಡಿ, ಭಾಸ್ಕರ್ ರೆಡ್ಡಿ ,ಬಿ.ಎಂ. ರಾಮಚಂದ್ರ, ಪದ್ಮಾವತ್ತಮ್ಮ, ಸುಬ್ರಮಣ್ಯ, ಸುಬ್ರಮಣಿ, ರವಿಕುಮಾರ್, ಮಂಜುನಾಥ್, ಕೆ. ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ನಗರದಲ್ಲಿ ಭಾನುವಾರ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ 150 ಉತ್ತಮ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. </p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಮೋಹನ್ ಬಾಬು ಮಾತನಾಡಿ, ‘ಸಾವಿತ್ರಿಬಾಯಿ ಫುಲೆ ಅವರಂಥ ಮಹನೀಯರಿಂದಾಗಿ ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ಸಿಗುತ್ತಿದೆ’ ಎಂದು ಹೇಳಿದರು. </p>.<p>ಸಮಾಜದಲ್ಲಿ ಕಡ್ಡಾಯವಾಗಿ 6 ವರ್ಷದ ಮೀರಿದ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು ಎಂಬ ನೀತಿ ಜಾರಿಯಲ್ಲಿದೆ. ಅದರಂತೆ ಸಂವಿಧಾನದ 21 ಎ ನಲ್ಲಿ ಎಲ್ಲರೂ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕು ಆಗಿದೆ. ಹೀಗಾಗಿ, ಎಲ್ಲ ಮಕ್ಕಳು ತಪ್ಪದೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದರು. </p>.<p>ಎಂ.ಗೊಲ್ಲಹಳ್ಳಿ ಪ್ರಭಾಕರ್ ಮಾತನಾಡಿ, ಅನಾದಿಕಾಲದಿಂದ ಮಹಿಳೆಯರಿಗೆ ಶಿಕ್ಷಣದಲ್ಲಿ ಉತ್ತಮ ಸ್ಥಾನಮಾನ ಸಿಕ್ಕಿರಲಿಲ್ಲ. ಸಾವಿತ್ರಿಬಾಯಿ ಫುಲೆ ಅವರು ಹೆಣ್ಣು ಮಕ್ಕಳಿಗಾಗಿ ಶಾಲೆ ತೆರೆದರು. ತನ್ನ ಪತಿ ಜ್ಯೋತಿ ಬಾಫುಲೆ ಸಹಕರಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರು ಎಂದರು. </p>.<p>ಈ ಮೂಲಕ ದೇಶದ ಮೊಟ್ಟ ಮೊದಲ ಶಿಕ್ಷಕಿಯಾಗಿ, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತನ್ನ ಜೀವನ ಮುಡುಪಾಗಿಟ್ಟರು. ಇವರ ಆದರ್ಶಗಳು ನಮಗೆ ಸ್ಫೂರ್ತಿದಾಯಕವಾಗಿದ್ದು, ಪುರುಷರಷ್ಟೇ ಮಹಿಳೆಯರೂ ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದರು. </p>.<p>ವಕೀಲ ಶ್ರೀನಿವಾಸ್ ರೆಡ್ಡಿ ಮಾತನಾಡಿದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಅರವಿಂದ್, ಕ್ಷೇತ್ರ ಸಮನ್ವಯ ಅಧಿಕಾರಿ ಪಿ. ಸೋಮೇಶ್, ವೆಂಕಟಗಿರಿಯಪ್ಪ, ರಹೀಂ ಶರೀಫ್ , ತ. ಸೊಣ್ಣಪ್ಪ, ಓಬಳ ರೆಡ್ಡಿ, ಭಾಸ್ಕರ್ ರೆಡ್ಡಿ ,ಬಿ.ಎಂ. ರಾಮಚಂದ್ರ, ಪದ್ಮಾವತ್ತಮ್ಮ, ಸುಬ್ರಮಣ್ಯ, ಸುಬ್ರಮಣಿ, ರವಿಕುಮಾರ್, ಮಂಜುನಾಥ್, ಕೆ. ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>