<p><strong>ಮುಳಬಾಗಿಲು</strong>: ನಗರದ ಶಿವಕೇಶವ ನಗರದಲ್ಲಿರುವ ಉದ್ಭವ ಶಿವಲಿಂಗೇಶ್ವರ ದೇವರ ರಥೋತ್ಸವದ ಪ್ರಯುಕ್ತ ಸೋಮವಾರ ದೇವಾಲಯದ ಆವರಣದಲ್ಲಿ ಶಿವಪಾರ್ವತಿಯರ ಕಲ್ಯಾಣೋತ್ಸವ ನಡೆಯಿತು.</p>.<p>ಸಾವಿರಾರು ವರ್ಷಗಳ ಇತಿಹಾಸ ಇರುವ ಪುರಾಣ ಪ್ರಸಿದ್ಧ ಉದ್ಭವ ಶಿವಲಿಂಗೇಶ್ವರ ಸ್ವಾಮಿಯ 17ನೇ ಬ್ರಹ್ಮರಥೋತ್ಸವ ಮಂಗಳವಾರ ನಡೆಯಲಿದ್ದು, ಅದಕ್ಕೂ ಮುನ್ನಾದಿನ ದೇವಾಲಯದಲ್ಲಿ ದೇವರ ಮೂಲ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಲ್ಯಾಣೋತ್ಸವ ನಡೆಯಿತು.</p>.<p>ಕಲ್ಯಾಣೋತ್ಸವ ಪ್ರಯುಕ್ತ ದೇವರುಗಳ ಮೂರ್ತಿಗಳನ್ನು ದೇವಾಲಯ ಮುಂಭಾಗದ ಆವರಣದಲ್ಲಿ ಇಟ್ಟು ಅತ್ಯಾಕರ್ಷಕವಾದ ಹೂಗಳಿಂದ ಅಲಂಕಾರ ಮಾಡಿ ಅರ್ಚಕರು ಕಾರ್ಯಕ್ರಮ ನಡೆಸಿಕೊಟ್ಟರು. ಹೋಮ, ಅಗ್ನಿಕುಂಡ, ಧ್ವಜಾರೋಹಣ, ಅಭಿಷೇಕ, ಮಹಾ ಮಂಗಳಾರತಿ , ತೀರ್ಥ ಪ್ರಸಾದ ವಿನಿಯೋಗ ಮತ್ತಿತರ ಕಾರ್ಯಕ್ರಮಗಳು ನಡೆದವು.</p>.<p>ಉದ್ಭವ ಶಿವಲಿಂಗೇಶ್ವರ ಸ್ವಾಮಿ ದೇವಾಲಯ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಂ.ಎಸ್. ರವಿಕುಮಾರ್, ಕಾವೇರಿ ನಾರಾಯಣ ಸ್ವಾಮಿ, ಸಿ.ವಿ.ಗೋಪಾಲ್, ನಾಗರಾಜಾಚಾರಿ, ವೈ.ಶಂಭಯ್ಯ, ಕೀಲಾಗಾಣಿ ಮಂಜುನಾಥ ಸ್ವಾಮಿ, ಯಲ್ಲಪ್ಪ, ಹಾಗೂ ಶ್ರೀ ವರಸಿದ್ದಿ ವಿನಾಯಕ ಸೇವಾ ಟ್ರಸ್ಟಿನ ಎಲ್ಲಾ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ನಗರದ ಶಿವಕೇಶವ ನಗರದಲ್ಲಿರುವ ಉದ್ಭವ ಶಿವಲಿಂಗೇಶ್ವರ ದೇವರ ರಥೋತ್ಸವದ ಪ್ರಯುಕ್ತ ಸೋಮವಾರ ದೇವಾಲಯದ ಆವರಣದಲ್ಲಿ ಶಿವಪಾರ್ವತಿಯರ ಕಲ್ಯಾಣೋತ್ಸವ ನಡೆಯಿತು.</p>.<p>ಸಾವಿರಾರು ವರ್ಷಗಳ ಇತಿಹಾಸ ಇರುವ ಪುರಾಣ ಪ್ರಸಿದ್ಧ ಉದ್ಭವ ಶಿವಲಿಂಗೇಶ್ವರ ಸ್ವಾಮಿಯ 17ನೇ ಬ್ರಹ್ಮರಥೋತ್ಸವ ಮಂಗಳವಾರ ನಡೆಯಲಿದ್ದು, ಅದಕ್ಕೂ ಮುನ್ನಾದಿನ ದೇವಾಲಯದಲ್ಲಿ ದೇವರ ಮೂಲ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಲ್ಯಾಣೋತ್ಸವ ನಡೆಯಿತು.</p>.<p>ಕಲ್ಯಾಣೋತ್ಸವ ಪ್ರಯುಕ್ತ ದೇವರುಗಳ ಮೂರ್ತಿಗಳನ್ನು ದೇವಾಲಯ ಮುಂಭಾಗದ ಆವರಣದಲ್ಲಿ ಇಟ್ಟು ಅತ್ಯಾಕರ್ಷಕವಾದ ಹೂಗಳಿಂದ ಅಲಂಕಾರ ಮಾಡಿ ಅರ್ಚಕರು ಕಾರ್ಯಕ್ರಮ ನಡೆಸಿಕೊಟ್ಟರು. ಹೋಮ, ಅಗ್ನಿಕುಂಡ, ಧ್ವಜಾರೋಹಣ, ಅಭಿಷೇಕ, ಮಹಾ ಮಂಗಳಾರತಿ , ತೀರ್ಥ ಪ್ರಸಾದ ವಿನಿಯೋಗ ಮತ್ತಿತರ ಕಾರ್ಯಕ್ರಮಗಳು ನಡೆದವು.</p>.<p>ಉದ್ಭವ ಶಿವಲಿಂಗೇಶ್ವರ ಸ್ವಾಮಿ ದೇವಾಲಯ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಂ.ಎಸ್. ರವಿಕುಮಾರ್, ಕಾವೇರಿ ನಾರಾಯಣ ಸ್ವಾಮಿ, ಸಿ.ವಿ.ಗೋಪಾಲ್, ನಾಗರಾಜಾಚಾರಿ, ವೈ.ಶಂಭಯ್ಯ, ಕೀಲಾಗಾಣಿ ಮಂಜುನಾಥ ಸ್ವಾಮಿ, ಯಲ್ಲಪ್ಪ, ಹಾಗೂ ಶ್ರೀ ವರಸಿದ್ದಿ ವಿನಾಯಕ ಸೇವಾ ಟ್ರಸ್ಟಿನ ಎಲ್ಲಾ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>