ತಾಲ್ಲೂಕಿನ ಭೀಮಾಪುರ ಗ್ರಾಮದಲ್ಲಿ ರೈತರೊಬ್ಬರ ತೋಟದಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಬೆಳೆ ಸಮೀಕ್ಷೆ ವಿವರಗಳನ್ನು ಸರ್ಕಾರದವಿವಿಧ ಯೋಜನೆಗಳಿಗೆ ಬಳಸಲಾಗುತ್ತದೆ, ಕನಿಷ್ಠ ಬೆಂಬಲ ಬೆಲೆ, ಬೆಳೆವಿಮೆ, ಕೋವಿಡ್ ಸಂಕಷ್ಟ ಪರಿಹಾರ ಆರ್ಟಿಸಿಯಲ್ಲಿ ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಹೆಚ್ಚು ಸಹಕಾರಿಯಾಗುತ್ತದೆ. ರೈತರು ಅಪ್ಲೋಡ್ ಮಾಡಲು ಖಾಸಗಿ ನಿವಾಸಿಗಳ ಅಥವಾ ಇಲಾಖೆ ಅಧಿಕಾರಿಗಳ ಸಹಾಯ ಪಡೆಯಬಹುದಾಗಿದೆ. ಪ್ರತಿಯೊಬ್ಬರು ತಮ್ಮ ತೋಟಗಳಲ್ಲಿ ತಾವು ಬೆಳೆ ಬೆಳೆದಿರುವ ಬೆಳೆಯ ಬಗ್ಗೆ ಮಾಹಿತಿ ಸಂಗ್ರಹಿಸುವುದು ಅತ್ಯಗತ್ಯವಾಗಿದೆ ಎಂದರು.