<p><strong>ಕೋಲಾರ:</strong> ಮುಳಬಾಗಿಲು ತಾಲ್ಲೂಕಿನಲ್ಲಿರುವ ಐತಿಹಾಸಿಕ ದೇವಾಲಯಗಳು, ರಸ್ತೆ ಮಾರ್ಗಗಳು ಸೇರಿದಂತೆ ಇನ್ನು ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಭರವಸೆ ನೀಡಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಮುಳಬಾಗಿಲಿನ ನಾಗರಿಕ ವೇದಿಕೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>ಮುಳಬಾಗಿಲು ತಾಲ್ಲೂಕಿನ 8 ಐತಿಹಾಸಿಕ ದೇವಾಲಯಗಳನ್ನು ಅಭಿವೃದ್ಧಿಪಡಿಸಬೇಕು, ದೇವಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ವೇದಿಕೆಯ ಸದಸ್ಯರು ಮನವಿ ಮಾಡಿದರು.</p>.<p>ಆಗ ಜಿಲ್ಲಾಧಿಕಾರಿಯು, ಮುಜುರಾಯಿ ತಹಶೀಲ್ದಾರ್ ಜೊತೆ ಚರ್ಚಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.</p>.<p>ಕೊಲದೇವಿ ಗರುಡ ದೇವಸ್ಥಾನ ಸೇರಿದಂತೆ ಇನ್ನಿತರ ದೇವಾಲಯಗಳಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ವ್ಯವಸ್ಥಾಪನ ಸಮಿತಿ ರಚಿಸಲು ಸೂಚಿಸಿದರು.</p>.<p>ಸದಸ್ಯರು ಮಾತನಾಡಿ, ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣವಾಗಬೇಕಾಗಿದೆ. ಮುಳಬಾಗಿಲು ಎಪಿಎಂಸಿ ಮಾರುಕಟ್ಟೆ ಒತ್ತುವರಿಯಾಗುತ್ತಿದ್ದು, ಆವರಣವನ್ನು ಸರ್ವೇ ನಡೆಸಿ ಕಾಂಪೌಂಡ್ ನಿರ್ಮಿಸಬೇಕೆಂದು ಕೋರಿದರು.</p>.<p>ಮುಳಬಾಗಿಲು ನಗರದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಬಸ್ ನಿಲ್ದಾಣದ ಬಳಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.</p>.<p>ಮುಳಬಾಗಿಲು ತಾಲ್ಲೂಕಿನಲ್ಲಿ ಕೆಲಸಕ್ಕಾಗಿ ಅನೇಕ ವಿದ್ಯಾವಂತ ಯುವಕ ಯುವತಿಯರು ದೂರದ ಬೆಂಗಳೂರಿಗೆ ಹೋಗುತ್ತಿರುತ್ತಾರೆ. ಆದ್ದರಿಂದ ತಾಲ್ಲೂಕಿನಲ್ಲಿ ಕೈಗಾರಿಕೆ ಪ್ರಾರಂಭಿಸಲು ಮನವಿ ಮಾಡಿದರು. ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರಮುಖ ಸ್ಥಳಗಳ ಮಾಹಿತಿಯನ್ನು ದೊಡ್ಡ ಫಲಕಗಳಲ್ಲಿ ಅಳವಡಿಸಬೇಕೆಂದರು.</p>.<p>ಕಸಾಯಿಖಾನೆ ತ್ಯಾಜ್ಯವನ್ನು ನಗರದ ವಿವಿಧ ಭಾಗಗಳಲ್ಲಿ ಚೀಲಗಳಿಗೆ ತುಂಬಿಸಿ ಎಸೆದಿರುತ್ತಾರೆ ಎಂದು ದೂರಿದ್ದಕ್ಕೆ ಜಿಲ್ಲಾಧಿಕಾರಿಯು, ನಗರಸಭೆಯ ಅಧಿಕಾರಿಗಳು ಕಸಾಯಿಖಾನೆಗಳ ವಿರುದ್ಧ ದೂರು ದಾಖಲಿಸಿ ಪರವಾನಿಗೆ ರದ್ದುಪಡಿಸಲು ಸೂಚಿಸಿದರು.</p>.<p>ಕಸ ವಿಲೇವಾರಿ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ನಗರಸಭೆಯವರು ಅರಿವು ಮೂಡಿಸಬೇಕೆಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕಿ ಅಂಬಿಕಾ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್, ತಹಶೀಲ್ದಾರ್ ಗೀತಾ, ಮುಳಬಾಗಿಲಿನ ನಾಗರಿಕ ವೇದಿಕೆಯ ಸದಸ್ಯರು ಹಾಗೂ ಮಾಜಿ ಅಧಿಕಾರಿಗಳಾದ ಶ್ರೀನಿವಾಸಚಾರಿ, ಬಿ.ಎನ್.ಕೃಷ್ಣಯ್ಯ, ರಾಮಕೃಷ್ಣಪ್ಪ, ಪ್ರೊ.ಜಯರಾಂ, ನಿರಂಜನ್ ಇದ್ದರು.</p>.<p><strong>ಐತಿಹಾಸಿಕ ದೇವಾಲಯಗಳನ್ನು ಅಭಿವೃದ್ಧಿಪಡಿಸಲು ಮನವಿ ಎಪಿಎಂಸಿ ಮಾರುಕಟ್ಟೆ ಒತ್ತುವರಿ ತಪ್ಪಿಸಿ ತಾಲ್ಲೂಕಿನಲ್ಲಿ ಕೈಗಾರಿಕೆ ಪ್ರಾರಂಭಿಸಲು ಕೋರಿಕೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಮುಳಬಾಗಿಲು ತಾಲ್ಲೂಕಿನಲ್ಲಿರುವ ಐತಿಹಾಸಿಕ ದೇವಾಲಯಗಳು, ರಸ್ತೆ ಮಾರ್ಗಗಳು ಸೇರಿದಂತೆ ಇನ್ನು ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಭರವಸೆ ನೀಡಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಮುಳಬಾಗಿಲಿನ ನಾಗರಿಕ ವೇದಿಕೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>ಮುಳಬಾಗಿಲು ತಾಲ್ಲೂಕಿನ 8 ಐತಿಹಾಸಿಕ ದೇವಾಲಯಗಳನ್ನು ಅಭಿವೃದ್ಧಿಪಡಿಸಬೇಕು, ದೇವಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ವೇದಿಕೆಯ ಸದಸ್ಯರು ಮನವಿ ಮಾಡಿದರು.</p>.<p>ಆಗ ಜಿಲ್ಲಾಧಿಕಾರಿಯು, ಮುಜುರಾಯಿ ತಹಶೀಲ್ದಾರ್ ಜೊತೆ ಚರ್ಚಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.</p>.<p>ಕೊಲದೇವಿ ಗರುಡ ದೇವಸ್ಥಾನ ಸೇರಿದಂತೆ ಇನ್ನಿತರ ದೇವಾಲಯಗಳಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ವ್ಯವಸ್ಥಾಪನ ಸಮಿತಿ ರಚಿಸಲು ಸೂಚಿಸಿದರು.</p>.<p>ಸದಸ್ಯರು ಮಾತನಾಡಿ, ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣವಾಗಬೇಕಾಗಿದೆ. ಮುಳಬಾಗಿಲು ಎಪಿಎಂಸಿ ಮಾರುಕಟ್ಟೆ ಒತ್ತುವರಿಯಾಗುತ್ತಿದ್ದು, ಆವರಣವನ್ನು ಸರ್ವೇ ನಡೆಸಿ ಕಾಂಪೌಂಡ್ ನಿರ್ಮಿಸಬೇಕೆಂದು ಕೋರಿದರು.</p>.<p>ಮುಳಬಾಗಿಲು ನಗರದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಬಸ್ ನಿಲ್ದಾಣದ ಬಳಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.</p>.<p>ಮುಳಬಾಗಿಲು ತಾಲ್ಲೂಕಿನಲ್ಲಿ ಕೆಲಸಕ್ಕಾಗಿ ಅನೇಕ ವಿದ್ಯಾವಂತ ಯುವಕ ಯುವತಿಯರು ದೂರದ ಬೆಂಗಳೂರಿಗೆ ಹೋಗುತ್ತಿರುತ್ತಾರೆ. ಆದ್ದರಿಂದ ತಾಲ್ಲೂಕಿನಲ್ಲಿ ಕೈಗಾರಿಕೆ ಪ್ರಾರಂಭಿಸಲು ಮನವಿ ಮಾಡಿದರು. ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರಮುಖ ಸ್ಥಳಗಳ ಮಾಹಿತಿಯನ್ನು ದೊಡ್ಡ ಫಲಕಗಳಲ್ಲಿ ಅಳವಡಿಸಬೇಕೆಂದರು.</p>.<p>ಕಸಾಯಿಖಾನೆ ತ್ಯಾಜ್ಯವನ್ನು ನಗರದ ವಿವಿಧ ಭಾಗಗಳಲ್ಲಿ ಚೀಲಗಳಿಗೆ ತುಂಬಿಸಿ ಎಸೆದಿರುತ್ತಾರೆ ಎಂದು ದೂರಿದ್ದಕ್ಕೆ ಜಿಲ್ಲಾಧಿಕಾರಿಯು, ನಗರಸಭೆಯ ಅಧಿಕಾರಿಗಳು ಕಸಾಯಿಖಾನೆಗಳ ವಿರುದ್ಧ ದೂರು ದಾಖಲಿಸಿ ಪರವಾನಿಗೆ ರದ್ದುಪಡಿಸಲು ಸೂಚಿಸಿದರು.</p>.<p>ಕಸ ವಿಲೇವಾರಿ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ನಗರಸಭೆಯವರು ಅರಿವು ಮೂಡಿಸಬೇಕೆಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕಿ ಅಂಬಿಕಾ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್, ತಹಶೀಲ್ದಾರ್ ಗೀತಾ, ಮುಳಬಾಗಿಲಿನ ನಾಗರಿಕ ವೇದಿಕೆಯ ಸದಸ್ಯರು ಹಾಗೂ ಮಾಜಿ ಅಧಿಕಾರಿಗಳಾದ ಶ್ರೀನಿವಾಸಚಾರಿ, ಬಿ.ಎನ್.ಕೃಷ್ಣಯ್ಯ, ರಾಮಕೃಷ್ಣಪ್ಪ, ಪ್ರೊ.ಜಯರಾಂ, ನಿರಂಜನ್ ಇದ್ದರು.</p>.<p><strong>ಐತಿಹಾಸಿಕ ದೇವಾಲಯಗಳನ್ನು ಅಭಿವೃದ್ಧಿಪಡಿಸಲು ಮನವಿ ಎಪಿಎಂಸಿ ಮಾರುಕಟ್ಟೆ ಒತ್ತುವರಿ ತಪ್ಪಿಸಿ ತಾಲ್ಲೂಕಿನಲ್ಲಿ ಕೈಗಾರಿಕೆ ಪ್ರಾರಂಭಿಸಲು ಕೋರಿಕೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>