<p><strong>ಮುಳಬಾಗಿಲು</strong>: ತಾಲ್ಲೂಕಿನಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಎಲ್ಲಿ ನೋಡಿದರೂ ಭತ್ತ ಹಾಗೂ ರಾಗಿ ಪೈರುಗಳು ಕಂಗೊಳಿಸುತ್ತಿವೆ.</p>.<p>ತಾಲ್ಲೂಕಿನಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬಹುತೇಕ ಎಲ್ಲಾ ಕೆರೆಗಳು ತುಂಬಿ ಕೋಡಿ ಹರಿದರೆ, ಕಾಲುವೆ, ಕುಂಟೆ ಹಾಗೂ ಏಟಿಗಳು ಮೈದುಂಬಿ ಹರಿಯುತ್ತಿದೆ. ಇದರಿಂದ ತಾಲ್ಲೂಕಿನಲ್ಲಿ ಎಲ್ಲಾ ಬೆಳೆಗಳು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿವೆ.</p>.<p>ನಾಲ್ಕು ವರ್ಷಗಳ ಹಿಂದೆ ಕೆರೆಗಳು ತುಂಬಿದರೂ ಅಂತರ್ಜಲ ಹೆಚ್ಚಾಗಲು ಕೆರೆಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿಯ ಮಳೆಯಿಂದಾಗಿ ಎಲ್ಲಾ ಕೆರೆ, ಕುಂಟೆ ತುಂಬಿವೆ. ಕೆರೆಯ ತೂಬು ತೆಗೆಯದಿದ್ದರೂ ಬಾವಿ, ಕುಂಟೆ, ಕೊಳವೆ ಬಾವಿಗಳ ಅಂತರ್ಜಲ ಹೆಚ್ಚಿ ನೀರಿನ ಕೊರತೆ ನಿವಾರಣೆಯಾಗಿದೆ.</p>.<p>ಮಳೆ ಅಭಾವದಿಂದ ಜನತೆ ಕೇವಲ ವಾಣಿಜ್ಯ ಬೆಳೆಗಳತ್ತ ಮುಖ ಮಾಡಿದ್ದರು. ಆದರೆ, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಭೂಮಿ ತೇವಾಂಶದಿಂದ ಕೂಡಿದ್ದು, ಮತ್ತೆ ಹಳೆಯ ಬೆಳೆಗಳತ್ತ ಜನತೆ ಮುಖಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕಿನಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಎಲ್ಲಿ ನೋಡಿದರೂ ಭತ್ತ ಹಾಗೂ ರಾಗಿ ಪೈರುಗಳು ಕಂಗೊಳಿಸುತ್ತಿವೆ.</p>.<p>ತಾಲ್ಲೂಕಿನಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬಹುತೇಕ ಎಲ್ಲಾ ಕೆರೆಗಳು ತುಂಬಿ ಕೋಡಿ ಹರಿದರೆ, ಕಾಲುವೆ, ಕುಂಟೆ ಹಾಗೂ ಏಟಿಗಳು ಮೈದುಂಬಿ ಹರಿಯುತ್ತಿದೆ. ಇದರಿಂದ ತಾಲ್ಲೂಕಿನಲ್ಲಿ ಎಲ್ಲಾ ಬೆಳೆಗಳು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿವೆ.</p>.<p>ನಾಲ್ಕು ವರ್ಷಗಳ ಹಿಂದೆ ಕೆರೆಗಳು ತುಂಬಿದರೂ ಅಂತರ್ಜಲ ಹೆಚ್ಚಾಗಲು ಕೆರೆಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿಯ ಮಳೆಯಿಂದಾಗಿ ಎಲ್ಲಾ ಕೆರೆ, ಕುಂಟೆ ತುಂಬಿವೆ. ಕೆರೆಯ ತೂಬು ತೆಗೆಯದಿದ್ದರೂ ಬಾವಿ, ಕುಂಟೆ, ಕೊಳವೆ ಬಾವಿಗಳ ಅಂತರ್ಜಲ ಹೆಚ್ಚಿ ನೀರಿನ ಕೊರತೆ ನಿವಾರಣೆಯಾಗಿದೆ.</p>.<p>ಮಳೆ ಅಭಾವದಿಂದ ಜನತೆ ಕೇವಲ ವಾಣಿಜ್ಯ ಬೆಳೆಗಳತ್ತ ಮುಖ ಮಾಡಿದ್ದರು. ಆದರೆ, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಭೂಮಿ ತೇವಾಂಶದಿಂದ ಕೂಡಿದ್ದು, ಮತ್ತೆ ಹಳೆಯ ಬೆಳೆಗಳತ್ತ ಜನತೆ ಮುಖಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>