<p><strong>ಮುಳಬಾಗಿಲು</strong>: ನಗರದ ನೇತಾಜಿ ಕ್ರೀಡಾಂಗಣದ ಬಳಿ ಸಾಲಾಗಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಗುರುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿದ್ದು, ಮೂರ್ನಾಲ್ಕು ವಾಹನಗಳಿಗೆ ಬೆಂಕಿಯ ಶಾಖ ತಗುಲಿದೆ.</p>.<p>ಮುಳಬಾಗಿಲು ನಗರದಿಂದ ಬೇರೆಡೆಗೆ ನಾನಾ ಕೆಲಸ ಕಾರ್ಯಗಳಿಗೆ ಹೋಗುವ ದ್ವಿಚಕ್ರ ವಾಹನ ಸವಾರರು ಕ್ರೀಡಾಂಗಣದ ಒಂದು ಭಾಗದಲ್ಲಿ ನಿಲ್ಲಿಸುತ್ತಿದ್ದರು. ಅದೇ ರೀತಿ ಗುರುವಾರವೂ ಸುಮಾರು 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿದ್ದರು. ಆದರೆ ಆಕಸ್ಮಿಕ ಬೆಂಕಿಗೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.</p>.<p>ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ನಾಲ್ಕು ವಾಹನಗಳು ಸುಟ್ಟು ಕರಕಲಾಗಿದ್ದವು. ಉಳಿದ ವಾಹನಗಳನ್ನು ಬೆಂಕಿಯಿಂದ ರಕ್ಷಿಸಿದ್ದಾರೆ.</p>.<p>ನಗರ ಠಾಣೆ ಇನ್ಸ್ಪೆಕ್ಟರ್ ಸುಧಾಕರ್ ರೆಡ್ಡಿ, ಅಣ್ಣಯ್ಯ, ಎಲ್.ಶಿವರಾಜ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-18-239317219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ನಗರದ ನೇತಾಜಿ ಕ್ರೀಡಾಂಗಣದ ಬಳಿ ಸಾಲಾಗಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಗುರುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿದ್ದು, ಮೂರ್ನಾಲ್ಕು ವಾಹನಗಳಿಗೆ ಬೆಂಕಿಯ ಶಾಖ ತಗುಲಿದೆ.</p>.<p>ಮುಳಬಾಗಿಲು ನಗರದಿಂದ ಬೇರೆಡೆಗೆ ನಾನಾ ಕೆಲಸ ಕಾರ್ಯಗಳಿಗೆ ಹೋಗುವ ದ್ವಿಚಕ್ರ ವಾಹನ ಸವಾರರು ಕ್ರೀಡಾಂಗಣದ ಒಂದು ಭಾಗದಲ್ಲಿ ನಿಲ್ಲಿಸುತ್ತಿದ್ದರು. ಅದೇ ರೀತಿ ಗುರುವಾರವೂ ಸುಮಾರು 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿದ್ದರು. ಆದರೆ ಆಕಸ್ಮಿಕ ಬೆಂಕಿಗೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.</p>.<p>ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ನಾಲ್ಕು ವಾಹನಗಳು ಸುಟ್ಟು ಕರಕಲಾಗಿದ್ದವು. ಉಳಿದ ವಾಹನಗಳನ್ನು ಬೆಂಕಿಯಿಂದ ರಕ್ಷಿಸಿದ್ದಾರೆ.</p>.<p>ನಗರ ಠಾಣೆ ಇನ್ಸ್ಪೆಕ್ಟರ್ ಸುಧಾಕರ್ ರೆಡ್ಡಿ, ಅಣ್ಣಯ್ಯ, ಎಲ್.ಶಿವರಾಜ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-18-239317219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>