<p>ಮುಳಬಾಗಿಲು: ತಾಲ್ಲೂಕಿನಲ್ಲಿ ಗುರುವಾರ ಸಂಜೆ ಬಿದ್ದ ಭಾರೀ ಗಾಳಿ ಮಳೆಗೆ ಕೀಲಾಗಾಣಿ ಗ್ರಾಮದ ಬಾಳೆತೋಟ ಸಂಪೂರ್ಣ ಮುರಿದು ಬಿದ್ದಿದ್ದು, ಲಕ್ಷಾಂತರ ನಷ್ಟ ಸಂಭವಿಸಿದೆ.</p>.<p>ತಾಲ್ಲೂಕಿನಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿಯವರೆಗೂ ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದರೆ, ಕೆಲವು ಕಡೆಗಳಲ್ಲಿ ಮಳೆ ಹಾಗೂ ಗಾಳಿ ಬೀಸಿದೆ. ಹಾಗಾಗಿ ತಾಲ್ಲೂಕಿನ ಕೀಲಾಗಾಣಿ ಗ್ರಾಮದ ಹೊರವಲಯದಲ್ಲಿ ರೈತ ಮಂಜುನಾಥ ಸ್ವಾಮಿ ಹಾಗೂ ಕೆ.ಎಂ.ಶ್ರೀನಿವಾಸ ಎಂಬುವವರ ಬಾಳೆತೋಟ ಸಂಪೂರ್ಣ ಮುರಿದು ಬಿದ್ದಿದೆ.</p>.<p>ಮಂಜುನಾಥ ಸ್ವಾಮಿ ಅವರು 1.5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಏಲಕ್ಕಿ ಬಾಳೆತೋಟ ಫಸಲಿಗೆ ಬಂದಿದ್ದು, ಬಾಳೆ ಗೊನೆಗಳಿಂದ ತುಂಬಿತ್ತು. ಹಾಗಾಗಿ ಗಾಳಿ, ಮಳೆಗೆ ಬಹುತೇಕ ತೋಟ ನೆಲಕಚ್ಚಿದೆ. ಇದರಿಂದ ರೈತರಿಗೆ ಮೂರ್ನಾಲ್ಕು ಲಕ್ಷ ನಷ್ಟ ಉಂಟಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಇನ್ನೂ ಅದೇ ಗ್ರಾಮದ ಕೆ.ಎಂ.ಶ್ರೀನಿವಾಸ್ ಅವರ ತೋಟದಲ್ಲಿಯೂ ಸುಮಾರು ನಲವತ್ತು ಐವತ್ತು ಗಿಡಗಳು ನಾಶವಾಗಿದ್ದು, ನಷ್ಟ ಸಂಭವಿಸಿದೆ. ಇದರಿಂದ ರೈತರ ಬದುಕು ಬೀದಿಗೆ ಬಂದಂತಾಗಿದೆ ಎಂದರು.</p>.<p>ಬಾಳೆತೋಟ ನಾಶವಾದ ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ವಿ.ಗೀತಾ ಹಾಗೂ ಅಧಿಕಾರಿಗಳ ತಂಡ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಳಿಕ ತಹಶೀಲ್ದಾರ್ ವಿ.ಗೀತಾ ಮಾತನಾಡಿ, ಇಬ್ಬರೂ ರೈತರ ತೋಟಗಳಲ್ಲೂ ನೂರಾರು ಗಿಡಗಳು ನಾಶವಾಗಿದ್ದು, ಶೇಕಡಾ 90ರಷ್ಟು ನಷ್ಟ ಉಂಟಾಗಿದೆ. ಹಾಗಾಗಿ ಕೂಡಲೇ ಜಿಲ್ಲಾಧಿಕಾರಿಗಳಿಗೆ ಸಮಸ್ಯೆಯ ಚಿತ್ರಣ ತಿಳಿಸಿ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ತೋಟಗಾರಿಕಾ ಅಧಿಕಾರಿ ಪುನೀತ್, ಮುರುಗೇಶ್, ರಾಜಸ್ವ ನಿರೀಕ್ಷಕ ಸುಬ್ರಮಣಿ ಮತ್ತಿತರರ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-18-38214378</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ತಾಲ್ಲೂಕಿನಲ್ಲಿ ಗುರುವಾರ ಸಂಜೆ ಬಿದ್ದ ಭಾರೀ ಗಾಳಿ ಮಳೆಗೆ ಕೀಲಾಗಾಣಿ ಗ್ರಾಮದ ಬಾಳೆತೋಟ ಸಂಪೂರ್ಣ ಮುರಿದು ಬಿದ್ದಿದ್ದು, ಲಕ್ಷಾಂತರ ನಷ್ಟ ಸಂಭವಿಸಿದೆ.</p>.<p>ತಾಲ್ಲೂಕಿನಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿಯವರೆಗೂ ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದರೆ, ಕೆಲವು ಕಡೆಗಳಲ್ಲಿ ಮಳೆ ಹಾಗೂ ಗಾಳಿ ಬೀಸಿದೆ. ಹಾಗಾಗಿ ತಾಲ್ಲೂಕಿನ ಕೀಲಾಗಾಣಿ ಗ್ರಾಮದ ಹೊರವಲಯದಲ್ಲಿ ರೈತ ಮಂಜುನಾಥ ಸ್ವಾಮಿ ಹಾಗೂ ಕೆ.ಎಂ.ಶ್ರೀನಿವಾಸ ಎಂಬುವವರ ಬಾಳೆತೋಟ ಸಂಪೂರ್ಣ ಮುರಿದು ಬಿದ್ದಿದೆ.</p>.<p>ಮಂಜುನಾಥ ಸ್ವಾಮಿ ಅವರು 1.5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಏಲಕ್ಕಿ ಬಾಳೆತೋಟ ಫಸಲಿಗೆ ಬಂದಿದ್ದು, ಬಾಳೆ ಗೊನೆಗಳಿಂದ ತುಂಬಿತ್ತು. ಹಾಗಾಗಿ ಗಾಳಿ, ಮಳೆಗೆ ಬಹುತೇಕ ತೋಟ ನೆಲಕಚ್ಚಿದೆ. ಇದರಿಂದ ರೈತರಿಗೆ ಮೂರ್ನಾಲ್ಕು ಲಕ್ಷ ನಷ್ಟ ಉಂಟಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಇನ್ನೂ ಅದೇ ಗ್ರಾಮದ ಕೆ.ಎಂ.ಶ್ರೀನಿವಾಸ್ ಅವರ ತೋಟದಲ್ಲಿಯೂ ಸುಮಾರು ನಲವತ್ತು ಐವತ್ತು ಗಿಡಗಳು ನಾಶವಾಗಿದ್ದು, ನಷ್ಟ ಸಂಭವಿಸಿದೆ. ಇದರಿಂದ ರೈತರ ಬದುಕು ಬೀದಿಗೆ ಬಂದಂತಾಗಿದೆ ಎಂದರು.</p>.<p>ಬಾಳೆತೋಟ ನಾಶವಾದ ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ವಿ.ಗೀತಾ ಹಾಗೂ ಅಧಿಕಾರಿಗಳ ತಂಡ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಳಿಕ ತಹಶೀಲ್ದಾರ್ ವಿ.ಗೀತಾ ಮಾತನಾಡಿ, ಇಬ್ಬರೂ ರೈತರ ತೋಟಗಳಲ್ಲೂ ನೂರಾರು ಗಿಡಗಳು ನಾಶವಾಗಿದ್ದು, ಶೇಕಡಾ 90ರಷ್ಟು ನಷ್ಟ ಉಂಟಾಗಿದೆ. ಹಾಗಾಗಿ ಕೂಡಲೇ ಜಿಲ್ಲಾಧಿಕಾರಿಗಳಿಗೆ ಸಮಸ್ಯೆಯ ಚಿತ್ರಣ ತಿಳಿಸಿ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ತೋಟಗಾರಿಕಾ ಅಧಿಕಾರಿ ಪುನೀತ್, ಮುರುಗೇಶ್, ರಾಜಸ್ವ ನಿರೀಕ್ಷಕ ಸುಬ್ರಮಣಿ ಮತ್ತಿತರರ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-18-38214378</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>