<p><strong>ಮುಳಬಾಗಿಲು</strong>: ನಗರದ ಸೋಮೇಶ್ವರ ಪಾಳ್ಯದಲ್ಲಿರುವ ಪ್ರಸನ್ನ ಸೋಮೇಶ್ವರ ದೇವಾಲಯದಲ್ಲಿ ಮೂರನೇ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.</p>.<p>ಮೂಲ ದೇವರ ಶಿವನ ಲಿಂಗವನ್ನು ಬೆಣ್ಣೆ, ತುಪ್ಪ, ಅರಿಶಿನ ಕುಂಕುಮ ಹಾಗೂ ನಾನಾ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ರುದ್ರಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆದವು.</p>.<p>ದೇವಾಸ್ಥಾನಕ್ಕೆ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಡಿ.11ರಂದು ಕಡೆಯ ಕಾರ್ತಿಕ ಸೋಮವಾರದಂದು ದೇವಾಲಯದಲ್ಲಿ ಲಕ್ಷ ದೀಪೋತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಪ್ರಧಾನ ಅರ್ಚಕ ರಾಮನಾಥ ದೀಕ್ಷಿತ್ ತಿಳಿಸಿದರು.</p>
<p><strong>ಮುಳಬಾಗಿಲು</strong>: ನಗರದ ಸೋಮೇಶ್ವರ ಪಾಳ್ಯದಲ್ಲಿರುವ ಪ್ರಸನ್ನ ಸೋಮೇಶ್ವರ ದೇವಾಲಯದಲ್ಲಿ ಮೂರನೇ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.</p>.<p>ಮೂಲ ದೇವರ ಶಿವನ ಲಿಂಗವನ್ನು ಬೆಣ್ಣೆ, ತುಪ್ಪ, ಅರಿಶಿನ ಕುಂಕುಮ ಹಾಗೂ ನಾನಾ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ರುದ್ರಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆದವು.</p>.<p>ದೇವಾಸ್ಥಾನಕ್ಕೆ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಡಿ.11ರಂದು ಕಡೆಯ ಕಾರ್ತಿಕ ಸೋಮವಾರದಂದು ದೇವಾಲಯದಲ್ಲಿ ಲಕ್ಷ ದೀಪೋತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಪ್ರಧಾನ ಅರ್ಚಕ ರಾಮನಾಥ ದೀಕ್ಷಿತ್ ತಿಳಿಸಿದರು.</p>