<p><strong>ಮುಳಬಾಗಿಲು</strong>: ನಗರದ ಶಿವಕೇಶವ ನಗರದಲ್ಲಿರುವ ಉದ್ಭವ ಶಿವಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಶನಿವಾರ ನೂರಾರು ಭಕ್ತರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನೆರವೇರಿತು.</p>.<p>ಬ್ರಹ್ಮ ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಒಂದು ವಾರದಿಂದ ಧಾರ್ಮಿಕ ಕಾರ್ಯಕ್ರಮ ಹಾಗೂ ಉತ್ಸವಗಳು ನೆರವೇರಿದವು. ಶನಿವಾರ ರಥೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಜೊತೆಗೆ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.</p>.<p>ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ, ನೂರಾರು ಭಕ್ತರು ರಥವನ್ನು ಭಕ್ತಿಯಿಂದ ಎಳೆದರು. ಜೊತೆಗೆ ಭಕ್ತರು ರಥಕ್ಕೆ ಹೂ, ಬಾಳೆಹಣ್ಣು, ದವನ, ಉಪ್ಪು ಮತ್ತಿತರರ ಮಂಗಳಕರ ವಸ್ತುಗಳನ್ನು ಭಕ್ತಿಯಿಂದ ಅರ್ಪಿಸಿ ಹರಕೆ ತೀರಿಸಿದರು.</p>.<p>ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಾಯಿತು. ರಥ ದೇವಾಲಯದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ರಥದ ಉದ್ದಕ್ಕೂ ಭಕ್ತರು ಘೋಷಣೆ ಕೂಗುತ್ತಾ ಸಾಗಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-900774637</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ನಗರದ ಶಿವಕೇಶವ ನಗರದಲ್ಲಿರುವ ಉದ್ಭವ ಶಿವಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಶನಿವಾರ ನೂರಾರು ಭಕ್ತರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನೆರವೇರಿತು.</p>.<p>ಬ್ರಹ್ಮ ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಒಂದು ವಾರದಿಂದ ಧಾರ್ಮಿಕ ಕಾರ್ಯಕ್ರಮ ಹಾಗೂ ಉತ್ಸವಗಳು ನೆರವೇರಿದವು. ಶನಿವಾರ ರಥೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಜೊತೆಗೆ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.</p>.<p>ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ, ನೂರಾರು ಭಕ್ತರು ರಥವನ್ನು ಭಕ್ತಿಯಿಂದ ಎಳೆದರು. ಜೊತೆಗೆ ಭಕ್ತರು ರಥಕ್ಕೆ ಹೂ, ಬಾಳೆಹಣ್ಣು, ದವನ, ಉಪ್ಪು ಮತ್ತಿತರರ ಮಂಗಳಕರ ವಸ್ತುಗಳನ್ನು ಭಕ್ತಿಯಿಂದ ಅರ್ಪಿಸಿ ಹರಕೆ ತೀರಿಸಿದರು.</p>.<p>ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಾಯಿತು. ರಥ ದೇವಾಲಯದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ರಥದ ಉದ್ದಕ್ಕೂ ಭಕ್ತರು ಘೋಷಣೆ ಕೂಗುತ್ತಾ ಸಾಗಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-900774637</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>