<p><strong>ಮುಳಬಾಗಿಲು</strong>: ತಾಲ್ಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಶಾಲಾ ಆವರಣದಲ್ಲಿ ನಿರ್ಮಿಸಲಾಗುತ್ತಿದ್ದ ಮಸೀದಿ ಕಟ್ಟಡವನ್ನು ಮಸೀದಿ ನಿರ್ಮಾಣದ ಸಮಿತಿ ಸದಸ್ಯರೇ ಶನಿವಾರ ನೆಲಸಮ ಮಾಡಿದ್ದಾರೆ. ಈ ಮೂಲಕ ಶಾಲಾ ಆವರಣದಲ್ಲಿ ಮಸೀದಿ ನಿರ್ಮಿಸಲಾಗುತ್ತಿದೆ ಎಂಬ ಆರೋಪಗಳು ಮತ್ತು ಈ ಕುರಿತು ಉದ್ಭವವಾಗಿದ್ದ ಸಮಸ್ಯೆಗಳಿಗೆ ಇತಿಶ್ರೀ ಹಾಡಲಾಗಿದೆ. </p>.<p>ರಾಜೇಂದ್ರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ 300×300 ಅಡಿಗಳಷ್ಟು ಖಾತೆ ಮಾಡಿಕೊಡಲಾಗಿತ್ತು. ಇದೇ ಆವರಣದಲ್ಲಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರದಿಂದ ಶಾಲಾ ಆವರಣ ಹಾಗೂ ಮಸೀದಿ ನಿರ್ಮಾಣ ಸ್ಥಳಕ್ಕೆ ತಾಲ್ಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಭೇಟಿ ನೀಡಿ ಸರ್ವೆ ಮಾಡಿಸಿದ್ದರು. ಸ್ಥಳದಲ್ಲಿ ಮೂರು ದಿನಗಳಿಂದ ಸೂಕ್ತವಾದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಮಸೀದಿ ನಿರ್ಮಾಣದ ಮಸೀದ್–ಇ–ಮದೀನಾ ಮತ್ತು ಎಜುಕೇಷನಲ್ ಹಾಗೂ ಚಾರಿಟಬಲ್ ಟ್ರಸ್ಟ್ ಸಮಿತಿಯು ಸ್ವಯಂಪ್ರೇರಿತವಾಗಿ ಶಾಲಾ ಆವರಣದಲ್ಲಿ ನಿರ್ಮಿಸಲಾಗುತ್ತಿದ್ದ ಮಸೀದಿ ಕಟ್ಟಡವನ್ನು ಜೆಸಿಬಿ ಯಂತ್ರದಿಂದ ಧ್ವಂಸಗೊಳಿಸಿದರು. </p>.<p>ಕಟ್ಟಡದ ನೆಲಸಮ ಹಾಗೂ ಧ್ವಂಸದ ಕುರಿತು ನಮಗೆ ಯಾರಿಂದಲೂ ಒತ್ತಡ ಅಥವಾ ಮತ್ಯಾವುದೇ ಒತ್ತಾಯ ಇಲ್ಲ. ಸ್ವಯಂಪ್ರೇರಿತವಾಗಿ ಮಸೀದಿ ಕಟ್ಟಡವನ್ನು ತೆರವುಗೊಳಿಸಿದ್ದೇವೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಮಿತಿಯು ಲಿಖಿತವಾಗಿ ತಿಳಿಸಿದೆ. </p>.<p>ಎ.ಎಸ್.ಪಿ ಮನೀಷಾ, ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್, ನಂಗಲಿ ಸಬ್ ಇನ್ಸ್ಪೆಕ್ಟರ್ ಎಚ್.ಡಿ. ವಿದ್ಯಾಶ್ರೀ, ಪಿಡಿಒ ಸಿ.ಪಿ.ಅಶ್ವಥ್ ನಾರಾಯಣ ಹಾಗೂ ಮಸೀದಿ ಸಮಿತಿಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಶಾಲಾ ಆವರಣದಲ್ಲಿ ನಿರ್ಮಿಸಲಾಗುತ್ತಿದ್ದ ಮಸೀದಿ ಕಟ್ಟಡವನ್ನು ಮಸೀದಿ ನಿರ್ಮಾಣದ ಸಮಿತಿ ಸದಸ್ಯರೇ ಶನಿವಾರ ನೆಲಸಮ ಮಾಡಿದ್ದಾರೆ. ಈ ಮೂಲಕ ಶಾಲಾ ಆವರಣದಲ್ಲಿ ಮಸೀದಿ ನಿರ್ಮಿಸಲಾಗುತ್ತಿದೆ ಎಂಬ ಆರೋಪಗಳು ಮತ್ತು ಈ ಕುರಿತು ಉದ್ಭವವಾಗಿದ್ದ ಸಮಸ್ಯೆಗಳಿಗೆ ಇತಿಶ್ರೀ ಹಾಡಲಾಗಿದೆ. </p>.<p>ರಾಜೇಂದ್ರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ 300×300 ಅಡಿಗಳಷ್ಟು ಖಾತೆ ಮಾಡಿಕೊಡಲಾಗಿತ್ತು. ಇದೇ ಆವರಣದಲ್ಲಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರದಿಂದ ಶಾಲಾ ಆವರಣ ಹಾಗೂ ಮಸೀದಿ ನಿರ್ಮಾಣ ಸ್ಥಳಕ್ಕೆ ತಾಲ್ಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಭೇಟಿ ನೀಡಿ ಸರ್ವೆ ಮಾಡಿಸಿದ್ದರು. ಸ್ಥಳದಲ್ಲಿ ಮೂರು ದಿನಗಳಿಂದ ಸೂಕ್ತವಾದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಮಸೀದಿ ನಿರ್ಮಾಣದ ಮಸೀದ್–ಇ–ಮದೀನಾ ಮತ್ತು ಎಜುಕೇಷನಲ್ ಹಾಗೂ ಚಾರಿಟಬಲ್ ಟ್ರಸ್ಟ್ ಸಮಿತಿಯು ಸ್ವಯಂಪ್ರೇರಿತವಾಗಿ ಶಾಲಾ ಆವರಣದಲ್ಲಿ ನಿರ್ಮಿಸಲಾಗುತ್ತಿದ್ದ ಮಸೀದಿ ಕಟ್ಟಡವನ್ನು ಜೆಸಿಬಿ ಯಂತ್ರದಿಂದ ಧ್ವಂಸಗೊಳಿಸಿದರು. </p>.<p>ಕಟ್ಟಡದ ನೆಲಸಮ ಹಾಗೂ ಧ್ವಂಸದ ಕುರಿತು ನಮಗೆ ಯಾರಿಂದಲೂ ಒತ್ತಡ ಅಥವಾ ಮತ್ಯಾವುದೇ ಒತ್ತಾಯ ಇಲ್ಲ. ಸ್ವಯಂಪ್ರೇರಿತವಾಗಿ ಮಸೀದಿ ಕಟ್ಟಡವನ್ನು ತೆರವುಗೊಳಿಸಿದ್ದೇವೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಮಿತಿಯು ಲಿಖಿತವಾಗಿ ತಿಳಿಸಿದೆ. </p>.<p>ಎ.ಎಸ್.ಪಿ ಮನೀಷಾ, ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್, ನಂಗಲಿ ಸಬ್ ಇನ್ಸ್ಪೆಕ್ಟರ್ ಎಚ್.ಡಿ. ವಿದ್ಯಾಶ್ರೀ, ಪಿಡಿಒ ಸಿ.ಪಿ.ಅಶ್ವಥ್ ನಾರಾಯಣ ಹಾಗೂ ಮಸೀದಿ ಸಮಿತಿಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>