<p>ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಅರ್ಜುನ ಪ್ರತಿಷ್ಟಾಪಿತ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.</p>.<p>ರಥೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹ ಹಾಗೂ ದೇವಾಲಯವನ್ನು ನಾನಾ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಜೊತೆಗೆ ವಿವಿಧ ಪೂಜಾ ಕಾರ್ಯಗಳು ಹಾಗೂ ಉತ್ಸವಗಳು ನಡೆದವು.</p>.<p>ಬಿಸಿಲಿನ ಹಿನ್ನೆಲೆ ಬೆಳಗ್ಗೆಯೇ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ತಹಶೀಲ್ದಾರ್ ವಿ.ಗೀತಾ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ರಥಕ್ಕೆ ಚಾಲನೆ ಸಿಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು, ದವನ, ಹೂ ಸೇರಿದಂತೆ ವಿವಿಧ ಮಂಗಳಕರ ವಸ್ತುಗಳನ್ನು ಅರ್ಪಿಸುವ ಮೂಲಕ ಹರಕೆ ತೀರಿಸಿದರು.</p>.<p>ನಂತರ ರಥ ದೇವಾಲಯದ ಮುಂಭಾಗದಿಂದ ಕುರುಬರಪೇಟೆ, ರಾಮಸಮುದ್ರಂ ರಸ್ತೆ, ತಾಲ್ಲೂಕು ಪಂಚಾಯಿತಿ ಕಚೇರಿಗಳ ಮುಂಭಾಗದಲ್ಲಿ ಮೆರವಣಿಗೆ ಸಾಗಿತು. ಮೆರವಣಿಗೆ ಉದ್ದಕ್ಕೂ ಸಾವಿರಾರು ಮಂದಿ ಘೋಷಣೆ ಕೂಗುತ್ತಾ ಸಾಗಿದರು. ಭಕ್ತರಿಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ, ಅನ್ನದಾನ ನಡೆಯಿತು.</p>.<p>ರಥೋತ್ಸವಕ್ಕೂ ಮುನ್ನ ದೇವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು.</p>.<p>ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎನ್.ವಿ.ಬಾಬು, ದೇವಾಲಯದ ಅಭಿವೃದ್ಧಿ ಸಮಿತಿ ಹಾಗೂ ಮುಡಾ ಅಧ್ಯಕ್ಷ ಆರ್.ಎಸ್.ಸುಹಾಸ್ ಶೆಟ್ಟಿ, ನಗವಾರ ಸತ್ಯಣ್ಣ, ಗೊಲ್ಲಹಳ್ಳಿ ಜಗದೀಶ್, ಲಕ್ಷ್ಮಿ ನಾರಾಯಣ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-18-659991560</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಅರ್ಜುನ ಪ್ರತಿಷ್ಟಾಪಿತ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.</p>.<p>ರಥೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹ ಹಾಗೂ ದೇವಾಲಯವನ್ನು ನಾನಾ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಜೊತೆಗೆ ವಿವಿಧ ಪೂಜಾ ಕಾರ್ಯಗಳು ಹಾಗೂ ಉತ್ಸವಗಳು ನಡೆದವು.</p>.<p>ಬಿಸಿಲಿನ ಹಿನ್ನೆಲೆ ಬೆಳಗ್ಗೆಯೇ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ತಹಶೀಲ್ದಾರ್ ವಿ.ಗೀತಾ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ರಥಕ್ಕೆ ಚಾಲನೆ ಸಿಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು, ದವನ, ಹೂ ಸೇರಿದಂತೆ ವಿವಿಧ ಮಂಗಳಕರ ವಸ್ತುಗಳನ್ನು ಅರ್ಪಿಸುವ ಮೂಲಕ ಹರಕೆ ತೀರಿಸಿದರು.</p>.<p>ನಂತರ ರಥ ದೇವಾಲಯದ ಮುಂಭಾಗದಿಂದ ಕುರುಬರಪೇಟೆ, ರಾಮಸಮುದ್ರಂ ರಸ್ತೆ, ತಾಲ್ಲೂಕು ಪಂಚಾಯಿತಿ ಕಚೇರಿಗಳ ಮುಂಭಾಗದಲ್ಲಿ ಮೆರವಣಿಗೆ ಸಾಗಿತು. ಮೆರವಣಿಗೆ ಉದ್ದಕ್ಕೂ ಸಾವಿರಾರು ಮಂದಿ ಘೋಷಣೆ ಕೂಗುತ್ತಾ ಸಾಗಿದರು. ಭಕ್ತರಿಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ, ಅನ್ನದಾನ ನಡೆಯಿತು.</p>.<p>ರಥೋತ್ಸವಕ್ಕೂ ಮುನ್ನ ದೇವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು.</p>.<p>ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎನ್.ವಿ.ಬಾಬು, ದೇವಾಲಯದ ಅಭಿವೃದ್ಧಿ ಸಮಿತಿ ಹಾಗೂ ಮುಡಾ ಅಧ್ಯಕ್ಷ ಆರ್.ಎಸ್.ಸುಹಾಸ್ ಶೆಟ್ಟಿ, ನಗವಾರ ಸತ್ಯಣ್ಣ, ಗೊಲ್ಲಹಳ್ಳಿ ಜಗದೀಶ್, ಲಕ್ಷ್ಮಿ ನಾರಾಯಣ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-18-659991560</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>