<p>ಮುಳಬಾಗಿಲು: ತಾಲ್ಲೂಕಿನ ಆವಣಿ ಗ್ರಾಮದಲ್ಲಿ ಮುಳಬಾಗಿಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಡಬ್ಲ್ಯೂ ವಿದ್ಯಾರ್ಥಿಗಳಿಂದ ಪ್ರಾರಂಭವಾದ ಏಳು ದಿನಗಳ ಸಮಾಜ ಕಾರ್ಯ ಗ್ರಾಮೀಣ ಕಲಿಕಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಲಾಯಿತು.</p>.<p>ಈ ವೇಳೆ ಪ್ರಾಂಶುಪಾಲ ಡಾ.ಜಿ.ಮುನಿವೆಂಕಟಪ್ಪ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ವಿಷಯಗಳಲ್ಲಿ ಕಲಿತ ಕಲಿಕೆಯನ್ನು ಕೇವಲ ಪರೀಕ್ಷೆಗಳಿಗೆ ಮಾತ್ರ ಮೊಟಕುಗೊಳಿಸದೆ, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಸೇವೆಗೆ ಮುಂದಾಗಬೇಕು ಎಂದರು.</p>.<p>ಮನುಷ್ಯ ಕಲಿಯುವ ವಿದ್ಯೆ ಹಾಗೂ ಕಲಿಕೆ ಕೇವಲ ವೈಯಕ್ತಿಕವಾಗಿ ಬಳಕೆ ಮಾಡಿಕೊಂಡರೆ ಅದು ಸ್ವಾರ್ಥವಾಗುತ್ತದೆ. ಹಾಗಾಗಿ ಕಲಿತ ವಿದ್ಯೆ ಹಾಗೂ ಜ್ಞಾನ ಸಮಾಜಕ್ಕೆ ದಾರೆ ಎರೆಯುವ ಮೂಲಕ ಇತರರಿಗೂ ಜ್ಞಾನದ ಮೂಲಕ ದಾರಿದೀಪವಾಗಬೇಕೆಂದು ಹೇಳಿದರು.</p>.<p>ಹಿರಿಯ ಪ್ರಾಧ್ಯಾಪಕ ಡಾ.ಎಂ.ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿರುವ ಅಸಮಾನತೆ, ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಿ ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.</p>.<p>ನಂತರ ವಿದ್ಯಾರ್ಥಿಗಳು ಆವಣಿಯಲ್ಲಿ ವರದಕ್ಷಿಣೆ, ಸಾಂಕ್ರಾಮಿಕ ಕಾಯಿಲೆಗಳು, ಲಿಂಗತಾರತಮ್ಯ ವಿಷಯಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.</p>.<p>ಎಂ.ಕೃಷ್ಣಪ್ಪ, ಮೂರ್ತಿ, ವೆಂಕಟೇಶ್, ಎಲ್.ಕೇಶವ ಗಂಗಾಧರ ಮೂರ್ತಿ, ಎನ್.ಶಂಕರಪ್ಪ, ಶಶಿಕಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-18-87675507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ತಾಲ್ಲೂಕಿನ ಆವಣಿ ಗ್ರಾಮದಲ್ಲಿ ಮುಳಬಾಗಿಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಡಬ್ಲ್ಯೂ ವಿದ್ಯಾರ್ಥಿಗಳಿಂದ ಪ್ರಾರಂಭವಾದ ಏಳು ದಿನಗಳ ಸಮಾಜ ಕಾರ್ಯ ಗ್ರಾಮೀಣ ಕಲಿಕಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಲಾಯಿತು.</p>.<p>ಈ ವೇಳೆ ಪ್ರಾಂಶುಪಾಲ ಡಾ.ಜಿ.ಮುನಿವೆಂಕಟಪ್ಪ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ವಿಷಯಗಳಲ್ಲಿ ಕಲಿತ ಕಲಿಕೆಯನ್ನು ಕೇವಲ ಪರೀಕ್ಷೆಗಳಿಗೆ ಮಾತ್ರ ಮೊಟಕುಗೊಳಿಸದೆ, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಸೇವೆಗೆ ಮುಂದಾಗಬೇಕು ಎಂದರು.</p>.<p>ಮನುಷ್ಯ ಕಲಿಯುವ ವಿದ್ಯೆ ಹಾಗೂ ಕಲಿಕೆ ಕೇವಲ ವೈಯಕ್ತಿಕವಾಗಿ ಬಳಕೆ ಮಾಡಿಕೊಂಡರೆ ಅದು ಸ್ವಾರ್ಥವಾಗುತ್ತದೆ. ಹಾಗಾಗಿ ಕಲಿತ ವಿದ್ಯೆ ಹಾಗೂ ಜ್ಞಾನ ಸಮಾಜಕ್ಕೆ ದಾರೆ ಎರೆಯುವ ಮೂಲಕ ಇತರರಿಗೂ ಜ್ಞಾನದ ಮೂಲಕ ದಾರಿದೀಪವಾಗಬೇಕೆಂದು ಹೇಳಿದರು.</p>.<p>ಹಿರಿಯ ಪ್ರಾಧ್ಯಾಪಕ ಡಾ.ಎಂ.ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿರುವ ಅಸಮಾನತೆ, ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಿ ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.</p>.<p>ನಂತರ ವಿದ್ಯಾರ್ಥಿಗಳು ಆವಣಿಯಲ್ಲಿ ವರದಕ್ಷಿಣೆ, ಸಾಂಕ್ರಾಮಿಕ ಕಾಯಿಲೆಗಳು, ಲಿಂಗತಾರತಮ್ಯ ವಿಷಯಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.</p>.<p>ಎಂ.ಕೃಷ್ಣಪ್ಪ, ಮೂರ್ತಿ, ವೆಂಕಟೇಶ್, ಎಲ್.ಕೇಶವ ಗಂಗಾಧರ ಮೂರ್ತಿ, ಎನ್.ಶಂಕರಪ್ಪ, ಶಶಿಕಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-18-87675507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>