<p><strong>ಮುಳಬಾಗಿಲು</strong>: ಕಾನೂನುಬಾಹಿರವಾಗಿ ನಾಲ್ಕು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ಮಂಗಳವಾರ ಟೆಂಪೊ ಒಂದರ ಮೇಲೆ ನಡೆಸಿದ ಪೊಲೀಸರು, ನಾಲ್ಕು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಈ ಪ್ರಕರಣದಲ್ಲಿ ಕೋಲಾರದ ರಹಮತ್ ನಗರದ ಸೈಯದ್ ಜಾಕೀರ್ ಹುಸೇನ್ ಬಂಧಿತ ಆರೋಪಿ.</p>.<p>ಬಂಧಿತ ಆರೋಪಿಯು ಪುಂಗನೂರು ಸಂತೆಯಲ್ಲಿ ನಾಲ್ಕು ಹಸುಗಳನ್ನು ಖರೀದಿಸಿ, ಮುಳಬಾಗಿಲು ನಗರದಿಂದ ಕೋಲಾರಕ್ಕೆ ಸಾಗಿಸುತ್ತಿದ್ದರು. ಈ ಸಂದರ್ಭದಲ್ಲಿ ಕೆಲವು ಯುವಕರು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬುದಾಗಿ ಮುಳಬಾಗಿಲು ನಗರ ಠಾಣೆಗೆ ಮಾಹಿತಿ ನೀಡಿದರು. ಈ ಪ್ರಕಾರ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಟೆಂಪೊ ಮತ್ತು ನಾಲ್ಕು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.</p>.<p>ತಾನು ಹಸುಗಳನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಯಾವುದೇ ಅಕ್ರಮ ಎಸಗಿಲ್ಲ. ಹೀಗಾಗಿ, ಹಸುಗಳು ಹಾಗೂ ಟೆಂಪೊವನ್ನು ಬಿಟ್ಟು ಕಳುಹಿಸಬೇಕು ಎಂದು ಆರೋಪಿ ಸೈಯದ್ ಜಾಕೀರ್ ಹುಸೇನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಪೊಲೀಸ್ ಠಾಣೆ ಎದುರು ಸುಮಾರು ಮಂದಿ ಜಮಾಯಿಸಿದ ಕಾರಣ ಪರ–ವಿರೋಧ ಚರ್ಚೆಗಳು ನಡೆದು, ಗೊಂದಲದ ವಾತಾವರಣ ಉಂಟಾಯಿತು. ಈ ವೇಳೆ ಪೊಲೀಸರು ಜನರ ಗುಂಪನ್ನು ಚದುರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-18-1681106211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ಕಾನೂನುಬಾಹಿರವಾಗಿ ನಾಲ್ಕು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ಮಂಗಳವಾರ ಟೆಂಪೊ ಒಂದರ ಮೇಲೆ ನಡೆಸಿದ ಪೊಲೀಸರು, ನಾಲ್ಕು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಈ ಪ್ರಕರಣದಲ್ಲಿ ಕೋಲಾರದ ರಹಮತ್ ನಗರದ ಸೈಯದ್ ಜಾಕೀರ್ ಹುಸೇನ್ ಬಂಧಿತ ಆರೋಪಿ.</p>.<p>ಬಂಧಿತ ಆರೋಪಿಯು ಪುಂಗನೂರು ಸಂತೆಯಲ್ಲಿ ನಾಲ್ಕು ಹಸುಗಳನ್ನು ಖರೀದಿಸಿ, ಮುಳಬಾಗಿಲು ನಗರದಿಂದ ಕೋಲಾರಕ್ಕೆ ಸಾಗಿಸುತ್ತಿದ್ದರು. ಈ ಸಂದರ್ಭದಲ್ಲಿ ಕೆಲವು ಯುವಕರು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬುದಾಗಿ ಮುಳಬಾಗಿಲು ನಗರ ಠಾಣೆಗೆ ಮಾಹಿತಿ ನೀಡಿದರು. ಈ ಪ್ರಕಾರ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಟೆಂಪೊ ಮತ್ತು ನಾಲ್ಕು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.</p>.<p>ತಾನು ಹಸುಗಳನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಯಾವುದೇ ಅಕ್ರಮ ಎಸಗಿಲ್ಲ. ಹೀಗಾಗಿ, ಹಸುಗಳು ಹಾಗೂ ಟೆಂಪೊವನ್ನು ಬಿಟ್ಟು ಕಳುಹಿಸಬೇಕು ಎಂದು ಆರೋಪಿ ಸೈಯದ್ ಜಾಕೀರ್ ಹುಸೇನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಪೊಲೀಸ್ ಠಾಣೆ ಎದುರು ಸುಮಾರು ಮಂದಿ ಜಮಾಯಿಸಿದ ಕಾರಣ ಪರ–ವಿರೋಧ ಚರ್ಚೆಗಳು ನಡೆದು, ಗೊಂದಲದ ವಾತಾವರಣ ಉಂಟಾಯಿತು. ಈ ವೇಳೆ ಪೊಲೀಸರು ಜನರ ಗುಂಪನ್ನು ಚದುರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-18-1681106211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>