<p>ಮುಳಬಾಗಿಲು: ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮಾಂಭ ದೇವಿಯ 24ನೇ ವರ್ಷದ ಗಂಗಶಿರಸ್ಸು ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.</p>.<p>ಜಾತ್ರಾ ಮಹೋತ್ಸವದ ಪ್ರಯುಕ್ತ ಏ.24 ರಿಂದ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳವಾರ ಗಂಗಮಾಂಭ ದೇವಿ ಶಿರಸ್ಸನ್ನು (ಮೂರ್ತಿ) ನಗರದಲ್ಲಿ ಮೆರವಣಿಗೆ ನಡೆಯಿತು.</p>.<p>ನಾಲ್ಕು ದಿನಗಳಿಂದ ದೇವರ ಮೂಲ ವಿಗ್ರಹವನ್ನು ಒಂದೊಂದು ದಿನ ಒಂದೊಂದು ಬಗೆಯ ಅಲಂಕಾರ ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು.</p>.<p>ಸೋಮವಾರ ಮಧ್ಯರಾತ್ರಿ ಆರಂಭವಾದ ಗಂಗಶಿರಸ್ಸು ಮೆರವಣಿಗೆ ಮುತ್ಯಾಲಪೇಟೆಯ ಎಲ್ಲಾ ಬೀದಿಗಳಲ್ಲಿ ನಡೆಯಿತು. ಮೆರವಣಿಗೆ ಮನೆಗಳ ಬಳಿಗೆ ಬರುತ್ತಿದ್ದಂತೆ ಮಹಿಳೆಯರು ಪೂಜೆ ಸಲ್ಲಿಸಿದರು.</p>.<p>ನಂತರ ಮುಂಜಾನೆ ಶಿರಸ್ಸು ಮೆರವಣಿಗೆ ಕಾರ್ಯಕ್ರಮ ಮುಗಿಯಿತು. ಮಹಿಳೆಯರು ತಂಬಿಟ್ಟಿನ ದೀಪಗಳನ್ನು ದೇವರಿಗೆ ಸಲ್ಲಿಸಿದರು. ವಿವಿಧ ಗ್ರಾಮದ ಭಕ್ತರು ಸಹ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-643099942</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮಾಂಭ ದೇವಿಯ 24ನೇ ವರ್ಷದ ಗಂಗಶಿರಸ್ಸು ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.</p>.<p>ಜಾತ್ರಾ ಮಹೋತ್ಸವದ ಪ್ರಯುಕ್ತ ಏ.24 ರಿಂದ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳವಾರ ಗಂಗಮಾಂಭ ದೇವಿ ಶಿರಸ್ಸನ್ನು (ಮೂರ್ತಿ) ನಗರದಲ್ಲಿ ಮೆರವಣಿಗೆ ನಡೆಯಿತು.</p>.<p>ನಾಲ್ಕು ದಿನಗಳಿಂದ ದೇವರ ಮೂಲ ವಿಗ್ರಹವನ್ನು ಒಂದೊಂದು ದಿನ ಒಂದೊಂದು ಬಗೆಯ ಅಲಂಕಾರ ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು.</p>.<p>ಸೋಮವಾರ ಮಧ್ಯರಾತ್ರಿ ಆರಂಭವಾದ ಗಂಗಶಿರಸ್ಸು ಮೆರವಣಿಗೆ ಮುತ್ಯಾಲಪೇಟೆಯ ಎಲ್ಲಾ ಬೀದಿಗಳಲ್ಲಿ ನಡೆಯಿತು. ಮೆರವಣಿಗೆ ಮನೆಗಳ ಬಳಿಗೆ ಬರುತ್ತಿದ್ದಂತೆ ಮಹಿಳೆಯರು ಪೂಜೆ ಸಲ್ಲಿಸಿದರು.</p>.<p>ನಂತರ ಮುಂಜಾನೆ ಶಿರಸ್ಸು ಮೆರವಣಿಗೆ ಕಾರ್ಯಕ್ರಮ ಮುಗಿಯಿತು. ಮಹಿಳೆಯರು ತಂಬಿಟ್ಟಿನ ದೀಪಗಳನ್ನು ದೇವರಿಗೆ ಸಲ್ಲಿಸಿದರು. ವಿವಿಧ ಗ್ರಾಮದ ಭಕ್ತರು ಸಹ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-643099942</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>