<p><strong>ಮುಳಬಾಗಿಲು:</strong> ಇತ್ತೀಚೆಗೆ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ತಮ್ಮ ಭವಿಷ್ಯವನ್ನು ನಾಶಪಡಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸಿ ಎಂದು ಮುಳಬಾಗಿಲು ನ್ಯಾಯಾಲಯಗಳ ಸರ್ಕಾರಿ ಸಹಾಯಕ ಅಭಿಯೋಜಕ ಆರ್.ನಾಗರಾಜ್ ತಿಳಿಸಿದರು.</p>.<p>ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶ ನಿರ್ಮಾಣಕ್ಕೆ ಮಕ್ಕಳ ಪಾತ್ರ ಮಹತ್ವದ್ದು. ಹಾಗಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಆಗ ಮಕ್ಕಳು ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು.</p>.<p>ಇತ್ತೀಚೆಗೆ ಮೊಬೈಲ್ ಗುಂಗಿನಲ್ಲಿ ಸಿಲುಕಿರುವ ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸುವುದೇ ದೊಡ್ಡ ಸವಾಲ್ ಆಗಿದೆ. ಹಾಗಾಗಿ ಪೋಷಕರು ಮಕ್ಕಳನ್ನು ದೇಸಿ ಆಟ ಹಾಗೂ ಪುಸ್ತಕ ಓದುವ ಹವ್ಯಾಸದತ್ತ ಸೆಳೆಯಬೇಕು ಎಂದರು.</p>.<p>ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಅಶೋಕ್ ಕುಮಾರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮೌಲ್ಯಗಳ ಕಲಿಕೆಗೆ ಅವಕಾಶ ನೀಡಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ವಿದ್ಯಾರ್ಥಿಗಳಿಗೆ ಮೊಬೈಲ್ನಿಂದ ದೂರವಿರುವ ಕುರಿತು ಪ್ರತಿಜ್ಞಾ ವಿಧ ಬೋಧಿಸಿದರು.</p>.<p>ಅಶೋಕ್ ಕುಮಾರ್, ರಘು, ಪ್ರಾಂಶುಪಾಲ ಮುನಿನಾರಾಯಣಪ್ಪ, ಚಂಗಾರೆಡ್ಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ಇತ್ತೀಚೆಗೆ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ತಮ್ಮ ಭವಿಷ್ಯವನ್ನು ನಾಶಪಡಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸಿ ಎಂದು ಮುಳಬಾಗಿಲು ನ್ಯಾಯಾಲಯಗಳ ಸರ್ಕಾರಿ ಸಹಾಯಕ ಅಭಿಯೋಜಕ ಆರ್.ನಾಗರಾಜ್ ತಿಳಿಸಿದರು.</p>.<p>ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶ ನಿರ್ಮಾಣಕ್ಕೆ ಮಕ್ಕಳ ಪಾತ್ರ ಮಹತ್ವದ್ದು. ಹಾಗಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಆಗ ಮಕ್ಕಳು ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು.</p>.<p>ಇತ್ತೀಚೆಗೆ ಮೊಬೈಲ್ ಗುಂಗಿನಲ್ಲಿ ಸಿಲುಕಿರುವ ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸುವುದೇ ದೊಡ್ಡ ಸವಾಲ್ ಆಗಿದೆ. ಹಾಗಾಗಿ ಪೋಷಕರು ಮಕ್ಕಳನ್ನು ದೇಸಿ ಆಟ ಹಾಗೂ ಪುಸ್ತಕ ಓದುವ ಹವ್ಯಾಸದತ್ತ ಸೆಳೆಯಬೇಕು ಎಂದರು.</p>.<p>ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಅಶೋಕ್ ಕುಮಾರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮೌಲ್ಯಗಳ ಕಲಿಕೆಗೆ ಅವಕಾಶ ನೀಡಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ವಿದ್ಯಾರ್ಥಿಗಳಿಗೆ ಮೊಬೈಲ್ನಿಂದ ದೂರವಿರುವ ಕುರಿತು ಪ್ರತಿಜ್ಞಾ ವಿಧ ಬೋಧಿಸಿದರು.</p>.<p>ಅಶೋಕ್ ಕುಮಾರ್, ರಘು, ಪ್ರಾಂಶುಪಾಲ ಮುನಿನಾರಾಯಣಪ್ಪ, ಚಂಗಾರೆಡ್ಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>