<p><strong>ಕೆಜಿಎಫ್</strong>: ರಾಬರ್ಟ್ಸನ್ಪೇಟೆ ನಗರಸಭೆಯಲ್ಲಿ ಮಂಗಳವಾರ ಪೌರಕಾರ್ಮಿಕರ ದಿನ ಆಚರಿಸಲಾಯಿತು. </p>.<p>ಶಾಸಕಿ ಎಂ. ರೂಪಕಲಾ ಶಶಿಧರ್ ಮಾತನಾಡಿ, ‘ಪೌರ ಕಾರ್ಮಿಕರಿಗೆ ಸೂರಪಲ್ಲಿ ಬಳಿ 95 ಮನೆಗಳನ್ನು ನಿರ್ಮಾಣ ಮಾಡಿ ಹಸ್ತಾಂತರ ಮಾಡಲಾಗಿದೆ. ಇನ್ನೂ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಲು ಪ್ರಯತ್ನ ಮಾಡಲಾಗುವುದು’ ಎಂದರು. </p>.<p>ಎಲ್ಲರೂ ಏಳುವ ಮೊದಲೇ ತಾವು ಎದ್ದು ಊರನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಎಲ್ಲ ರೀತಿಯ ಗೌರವ ನೀಡಬೇಕು. ರಾಬರ್ಟ್ಸನ್ಪೇಟೆ ನಗರಸಭೆಗೆ 119 ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದೆ. ಈ ಪೈಕಿ ಪೈಕಿ 95 ಜನರಿಗೆ ಮೊದಲ ಹಂತದಲ್ಲಿ ಮನೆ ನೀಡಲಾಗಿದೆ. ಉಳಿದ ಕಾರ್ಮಿಕರಿಗೂ ಗೃಹಭಾಗ್ಯ ಯೋಜನೆಯಡಿ ಮನೆ ಕಟ್ಟಿ ಕೊಡಲಾಗುವುದು ಎಂದರು.</p>.<p>ಪೌರ ಕಾರ್ಮಿಕರು ಕೇವಲ ಕಸ ಗುಡಿಸಲು ಸೀಮಿತವಲ್ಲ. ಅವರಲ್ಲಿ ಇರುವ ಪ್ರತಿಭೆಗಳನ್ನು ಮತ್ತು ನಿಷ್ಠೆಯಿಂದ ಕೆಲಸ ಮಾಡುವವರನ್ನೂ ಗುರುತಿಸಿ, ಪ್ರೋತ್ಸಾಹಿಸಬೇಕು. ಕಾಯಂ ಇಲ್ಲದೆ ಕೆಲಸ ಮಾಡಿ ನಿವೃತ್ತಿಯಾದವರಿಗೆ ಸುತ್ತುನಿಧಿಯಲ್ಲಿ ₹7 ಲಕ್ಷ ನೀಡಲಾಗುತ್ತಿದೆ. ಇವೆಲ್ಲವೂ ಎಷ್ಟೋ ವರ್ಷದ ಹೋರಾಟದ ಫಲ ಎಂದು ತಿಳಿಸಿದರು.</p>.<p>ನಗರದ ಸ್ವಚ್ಛತೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆಯುವಂತೆ ಮಾಡಲು ಎಲ್ಲ ಪೌರಕಾರ್ಮಿಕರು ಸಹಕಾರ ನೀಡಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ ಹೇಳಿದರು.</p>.<p>ಪೌರ ಕಾರ್ಮಿಕ ಸಂಘದ ಒತ್ತಾಯದ ಮೇರೆಗೆ ಪೌರ ಕಾರ್ಮಿಕರ ದಿನಾಚರಣೆಯನ್ನು 2012ರಿಂದ ಮಾಡಲಾಗುತ್ತಿದೆ. ಪೌರ ಕಾರ್ಮಿಕರಿಗೆ ಪ್ರತಿದಿನ ಬೆಳಗಿನ ಉಪಾಹಾರ ನೀಡುವುದು ಕೂಡ ಸಂಘದ ಸಂಘಟಿತ ಹೋರಾಟದ ಫಲ ಎಂದು ಪೌರ ಕಾರ್ಮಿಕರ ರಾಜ್ಯ ಘಟಕದ ಅಧ್ಯಕ್ಷ ವೆಂಕಟೇಶಪ್ಪ ತಿಳಿಸಿದರು.</p>.<p>1996ರವರೆಗೆ ಪೌರಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳೇ ಸಂಬಳ ನೀಡಬೇಕಿತ್ತು. ಇದರಿಂದಾಗಿ ಪೌರಕಾರ್ಮಿಕರು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಸಂಬಳ ಪಡೆಯುವುದು ಕಷ್ಟವಾಗಿತ್ತು. ಪೌರ ಕಾರ್ಮಿಕರ ನಿರಂತರ ಹೋರಾಟದ ಫಲವಾಗಿ ಸರ್ಕಾರವು ಪೌರಕಾರ್ಮಿಕರಿಗೆ ಸಂಬಳ ನೀಡಲು ಒಪ್ಪಿಗೆ ನೀಡಿತು ಎಂದು ಆಯುಕ್ತ ಆಂಜನೇಯಲು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ರಾಬರ್ಟ್ಸನ್ಪೇಟೆ ನಗರಸಭೆಯಲ್ಲಿ ಮಂಗಳವಾರ ಪೌರಕಾರ್ಮಿಕರ ದಿನ ಆಚರಿಸಲಾಯಿತು. </p>.<p>ಶಾಸಕಿ ಎಂ. ರೂಪಕಲಾ ಶಶಿಧರ್ ಮಾತನಾಡಿ, ‘ಪೌರ ಕಾರ್ಮಿಕರಿಗೆ ಸೂರಪಲ್ಲಿ ಬಳಿ 95 ಮನೆಗಳನ್ನು ನಿರ್ಮಾಣ ಮಾಡಿ ಹಸ್ತಾಂತರ ಮಾಡಲಾಗಿದೆ. ಇನ್ನೂ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಲು ಪ್ರಯತ್ನ ಮಾಡಲಾಗುವುದು’ ಎಂದರು. </p>.<p>ಎಲ್ಲರೂ ಏಳುವ ಮೊದಲೇ ತಾವು ಎದ್ದು ಊರನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಎಲ್ಲ ರೀತಿಯ ಗೌರವ ನೀಡಬೇಕು. ರಾಬರ್ಟ್ಸನ್ಪೇಟೆ ನಗರಸಭೆಗೆ 119 ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದೆ. ಈ ಪೈಕಿ ಪೈಕಿ 95 ಜನರಿಗೆ ಮೊದಲ ಹಂತದಲ್ಲಿ ಮನೆ ನೀಡಲಾಗಿದೆ. ಉಳಿದ ಕಾರ್ಮಿಕರಿಗೂ ಗೃಹಭಾಗ್ಯ ಯೋಜನೆಯಡಿ ಮನೆ ಕಟ್ಟಿ ಕೊಡಲಾಗುವುದು ಎಂದರು.</p>.<p>ಪೌರ ಕಾರ್ಮಿಕರು ಕೇವಲ ಕಸ ಗುಡಿಸಲು ಸೀಮಿತವಲ್ಲ. ಅವರಲ್ಲಿ ಇರುವ ಪ್ರತಿಭೆಗಳನ್ನು ಮತ್ತು ನಿಷ್ಠೆಯಿಂದ ಕೆಲಸ ಮಾಡುವವರನ್ನೂ ಗುರುತಿಸಿ, ಪ್ರೋತ್ಸಾಹಿಸಬೇಕು. ಕಾಯಂ ಇಲ್ಲದೆ ಕೆಲಸ ಮಾಡಿ ನಿವೃತ್ತಿಯಾದವರಿಗೆ ಸುತ್ತುನಿಧಿಯಲ್ಲಿ ₹7 ಲಕ್ಷ ನೀಡಲಾಗುತ್ತಿದೆ. ಇವೆಲ್ಲವೂ ಎಷ್ಟೋ ವರ್ಷದ ಹೋರಾಟದ ಫಲ ಎಂದು ತಿಳಿಸಿದರು.</p>.<p>ನಗರದ ಸ್ವಚ್ಛತೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆಯುವಂತೆ ಮಾಡಲು ಎಲ್ಲ ಪೌರಕಾರ್ಮಿಕರು ಸಹಕಾರ ನೀಡಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ ಹೇಳಿದರು.</p>.<p>ಪೌರ ಕಾರ್ಮಿಕ ಸಂಘದ ಒತ್ತಾಯದ ಮೇರೆಗೆ ಪೌರ ಕಾರ್ಮಿಕರ ದಿನಾಚರಣೆಯನ್ನು 2012ರಿಂದ ಮಾಡಲಾಗುತ್ತಿದೆ. ಪೌರ ಕಾರ್ಮಿಕರಿಗೆ ಪ್ರತಿದಿನ ಬೆಳಗಿನ ಉಪಾಹಾರ ನೀಡುವುದು ಕೂಡ ಸಂಘದ ಸಂಘಟಿತ ಹೋರಾಟದ ಫಲ ಎಂದು ಪೌರ ಕಾರ್ಮಿಕರ ರಾಜ್ಯ ಘಟಕದ ಅಧ್ಯಕ್ಷ ವೆಂಕಟೇಶಪ್ಪ ತಿಳಿಸಿದರು.</p>.<p>1996ರವರೆಗೆ ಪೌರಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳೇ ಸಂಬಳ ನೀಡಬೇಕಿತ್ತು. ಇದರಿಂದಾಗಿ ಪೌರಕಾರ್ಮಿಕರು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಸಂಬಳ ಪಡೆಯುವುದು ಕಷ್ಟವಾಗಿತ್ತು. ಪೌರ ಕಾರ್ಮಿಕರ ನಿರಂತರ ಹೋರಾಟದ ಫಲವಾಗಿ ಸರ್ಕಾರವು ಪೌರಕಾರ್ಮಿಕರಿಗೆ ಸಂಬಳ ನೀಡಲು ಒಪ್ಪಿಗೆ ನೀಡಿತು ಎಂದು ಆಯುಕ್ತ ಆಂಜನೇಯಲು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>