‘ರೈತರು, ದಿನಗೂಲಿ ನೌಕರರು ಹಾಗೂ ಶ್ರಮಿಕ ವರ್ಗವು ದೇಶದ ಬೆನ್ನೆಲುಬು. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಜನರನ್ನು ಕಡೆಗಣಿಸಿವೆ. ದಿಗ್ಬಂಧನದ ಹಿನ್ನೆಲೆಯಲ್ಲಿ ಈ ಜನರಿಗೆ ಯಾವುದೇ ನೆರವು ಸಿಕ್ಕಿಲ್ಲ. ರೈತರು, ದಿನಗೂಲಿ ನೌಕರರು ಮತ್ತು ಶ್ರಮಿಕ ವರ್ಗದ ಜನರು ದಿನನಿತ್ಯದ ಬಳಕೆಗೆ ಬೇಕಾದ ದಿನಸಿ, ಆಹಾರ ಪದಾರ್ಥಗಳಿಲ್ಲದೆ ಸ್ವಾಭಿಮಾನ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ’ ಎಂದು ಹೇಳಿದರು.