ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದ ಮಂಜುನಾಥ್ ಅವರಿಗೆ ಇಬ್ಬರು ಪತ್ನಿಯರಿದ್ದು , ಮೊದಲ ಪತ್ನಿ ಸೌಭಾಗ್ಯಮ್ಮ ಎಂಬುವವರನ್ನು ಬಿಟ್ಟು, ಮಿಣಜೇನಹಳ್ಳಿಯ ನೇತ್ರಾ ಎಂಬುವವರನ್ನು ಎರಡನೇ ಮದುವೆಯಾಗಿ ಅಲ್ಲಿಯೇ ವಾಸವಾಗಿದ್ದರು. ಶನಿವಾರ ಮಿಣಜೇನಹಳ್ಳಿಗೆ ದ್ವಿಚಕ್ರ ವಾಹನದಲ್ಲಿ ಬರುವಾಗ ಬಂಗಾರಪೇಟೆ ತಾಲ್ಲೂಕಿನ ಮಾದ ಮುತ್ತನಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಮೃತನ ಸಂಬಧಿಕರು ಆರೋಪಿಸಿದ್ದಾರೆ.