ಸ್ನೇಹಿತರಾದ ನಾಗೇಶ್ ಮತ್ತು ಗೋಪಾಲ್ ಶುಕ್ರವಾರ ರಾತ್ರಿ ಪಾನಮತ್ತರಾಗಿ ಮದ್ಯದ ನಶೆಯಲ್ಲಿ ಜಗಳವಾಡಿದ್ದರು. ನಂತರ ಗ್ರಾಮಸ್ಥರು ಇಬ್ಬರನ್ನು ಸಮಾಧಾನಪಡಿಸಿ ಮನೆಗೆ ಕಳುಹಿಸಿದ್ದರು. ಗೋಪಾಲ್ ಕುಟುಂಬ ಸದಸ್ಯರೊಂದಿಗೆ ಊಟ ಮಾಡಿದ ನಂತರ ಮನೆಯ ಮುಂದಿನ ಜಗಲಿಯಲ್ಲಿ ಮಲಗಿದ್ದರು. ನಾಗೇಶ್, ಮಧ್ಯ ರಾತ್ರಿ ಗೋಪಾಲ್ರ ಮನೆ ಬಳಿ ಬಂದು ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.