<p>ಕೆಜಿಎಫ್: ನಿರ್ಮಾಣವಾಗಿಯೂ ಉದ್ಘಾಟನೆಯಾಗದ ಸರ್ಕಾರಿ ಕಚೇರಿಗಳನ್ನು ಕೂಡಲೇ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಾಡಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಕ್ಯಾಸಂಬಳ್ಳಿಯಲ್ಲಿ ನಡೆದಿದೆ.</p>.<p>‘ನಾಡಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಕ್ಕೆ ಸರ್ಕಾರ ಸುಸಜ್ಜಿತ ಕಟ್ಟಡವನ್ನು ಕಟ್ಟಿಕೊಟ್ಟಿದ್ದರೂ, ರಾಜಕೀಯ ಕಾರಣಗಳಿಂದಾಗಿ ಅವುಗಳನ್ನು ಉದ್ಘಾಟನೆ ಮಾಡದೆ, ಬೀಗ ಹಾಕಿಟ್ಟುಕೊಳ್ಳಲಾಗಿದೆ. ಹಳೇ ಕಟ್ಟಡಗಳಲ್ಲಿ ಸಾರ್ವಜನಿಕರ ಕೆಲಸಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಹಲವಾರು ಬಾರಿ ಮನವಿ ಮಾಡಿದ್ದರೂ, ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>‘ಕ್ಯಾಸಂಬಳ್ಳಿ ಸುತ್ತಮುತ್ತಲಿನ ನೂರಾರು ಹಳ್ಳಿಗಳ ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ನಂತರದ ವಿದ್ಯಾಭ್ಯಾಸ ಮರೀಚಿಕೆ ಆಗುತ್ತಿದೆ. ಸಾವಿರಾರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಸ್ಥಾಪನೆ ಮಾಡಬೇಕೆಂದು ಸಾರ್ವಜನಿಕರು ಹೋರಾಟಗಳನ್ನು ರೂಪಿಸಿಕೊಂಡು ಬರುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ಶಾಸಕರು ಕೂಡ ಈ ನಿಟ್ಟಿನಲ್ಲಿ ಶಿಫಾರಸ್ಸು ಮಾಡಿದ್ದಾರೆ. ಆದರೆ ಸರ್ಕಾರದ ಹಂತದಲ್ಲಿ ಮಂಜೂರಾತಿ ದೊರೆಕಿಲ್ಲ. ಅದೇ ರೀತಿ ಪ್ರೌಢಶಾಲೆಗೆ ಕೂಡ ಜಮೀನನ್ನು ತಾಲ್ಲೂಕು ಆಡಳಿತ ನೀಡಿಲ್ಲ’ ಎಂದು ಆರೋಪಿಸಲಾಯಿತು.</p>.<p>ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಸ್ವಂತ ಊರಿನಲ್ಲಿ ಸರ್ಕಾರದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಗ್ರಾಮ ಪಂಚಾಯಿತಿ ಕಚೇರಿಯ ಮುಂಭಾಗದ ರಸ್ತೆಯಲ್ಲಿಯೇ ಕಸದ ರಾಶಿ ತುಂಬಿ ತುಳುಕುತ್ತಿದೆ. ಅವುಗಳಸ್ವಚ್ಛತೆ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಲಾಯಿತು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಗ್ರಾಮದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಲು ಯತ್ನಿಸಿದರು. ವಿಧಾನ ಪರಿಷತ್ ಚುನಾವಣೆ ನಂತರನಾಡ ಕಚೇರಿಯನ್ನು ಸಾರ್ವಜನಿಕ<br />ಸೇವೆಗೆ ಬಳಸುವುದಾಗಿ ರಾಜಸ್ವ ನಿರೀಕ್ಷಕ ನಾರಾಯಣಸ್ವಾಮಿ ಭರವಸೆ ನೀಡಿದರು.</p>.<p>ಮುಖಂಡರಾದ ಸೋಮಸುಂದರರೆಡ್ಡಿ, ಕರ್ನಾಟಕ ಸಿಂಹ ಘರ್ಜನೆ ವೇದಿಕೆಯ ಪ್ರಸನ್ನಕುಮಾರ ಸ್ವಾಮಿ, ಮಂಜುನಾಥ್, ಯುಗೇಂದ್ರ, ಶ್ರೀನಿವಾಸರೆಡ್ಡಿ, ಕೆಆರ್ಎಸ್ ಸಂಘಟನೆಯ ರಮೇಶ್, ಪೌಲ್, ಮಂಜುನಾಥ್, ವಿಜಯರೆಡ್ಡಿ, ಗ್ರಾಮದ ಮುಖಂಡರಾದ ರಾಜಾರೆಡ್ಡಿ, ಮಂಜುನಾಥ ರೆಡ್ಡಿ, ರಾಮರೆಡ್ಡಿ, ಅಮರೇಶ್, ಕಣ್ಣಪ್ಪ, ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ನಿರ್ಮಾಣವಾಗಿಯೂ ಉದ್ಘಾಟನೆಯಾಗದ ಸರ್ಕಾರಿ ಕಚೇರಿಗಳನ್ನು ಕೂಡಲೇ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಾಡಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಕ್ಯಾಸಂಬಳ್ಳಿಯಲ್ಲಿ ನಡೆದಿದೆ.</p>.<p>‘ನಾಡಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಕ್ಕೆ ಸರ್ಕಾರ ಸುಸಜ್ಜಿತ ಕಟ್ಟಡವನ್ನು ಕಟ್ಟಿಕೊಟ್ಟಿದ್ದರೂ, ರಾಜಕೀಯ ಕಾರಣಗಳಿಂದಾಗಿ ಅವುಗಳನ್ನು ಉದ್ಘಾಟನೆ ಮಾಡದೆ, ಬೀಗ ಹಾಕಿಟ್ಟುಕೊಳ್ಳಲಾಗಿದೆ. ಹಳೇ ಕಟ್ಟಡಗಳಲ್ಲಿ ಸಾರ್ವಜನಿಕರ ಕೆಲಸಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಹಲವಾರು ಬಾರಿ ಮನವಿ ಮಾಡಿದ್ದರೂ, ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>‘ಕ್ಯಾಸಂಬಳ್ಳಿ ಸುತ್ತಮುತ್ತಲಿನ ನೂರಾರು ಹಳ್ಳಿಗಳ ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ನಂತರದ ವಿದ್ಯಾಭ್ಯಾಸ ಮರೀಚಿಕೆ ಆಗುತ್ತಿದೆ. ಸಾವಿರಾರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಸ್ಥಾಪನೆ ಮಾಡಬೇಕೆಂದು ಸಾರ್ವಜನಿಕರು ಹೋರಾಟಗಳನ್ನು ರೂಪಿಸಿಕೊಂಡು ಬರುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ಶಾಸಕರು ಕೂಡ ಈ ನಿಟ್ಟಿನಲ್ಲಿ ಶಿಫಾರಸ್ಸು ಮಾಡಿದ್ದಾರೆ. ಆದರೆ ಸರ್ಕಾರದ ಹಂತದಲ್ಲಿ ಮಂಜೂರಾತಿ ದೊರೆಕಿಲ್ಲ. ಅದೇ ರೀತಿ ಪ್ರೌಢಶಾಲೆಗೆ ಕೂಡ ಜಮೀನನ್ನು ತಾಲ್ಲೂಕು ಆಡಳಿತ ನೀಡಿಲ್ಲ’ ಎಂದು ಆರೋಪಿಸಲಾಯಿತು.</p>.<p>ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಸ್ವಂತ ಊರಿನಲ್ಲಿ ಸರ್ಕಾರದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಗ್ರಾಮ ಪಂಚಾಯಿತಿ ಕಚೇರಿಯ ಮುಂಭಾಗದ ರಸ್ತೆಯಲ್ಲಿಯೇ ಕಸದ ರಾಶಿ ತುಂಬಿ ತುಳುಕುತ್ತಿದೆ. ಅವುಗಳಸ್ವಚ್ಛತೆ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಲಾಯಿತು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಗ್ರಾಮದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಲು ಯತ್ನಿಸಿದರು. ವಿಧಾನ ಪರಿಷತ್ ಚುನಾವಣೆ ನಂತರನಾಡ ಕಚೇರಿಯನ್ನು ಸಾರ್ವಜನಿಕ<br />ಸೇವೆಗೆ ಬಳಸುವುದಾಗಿ ರಾಜಸ್ವ ನಿರೀಕ್ಷಕ ನಾರಾಯಣಸ್ವಾಮಿ ಭರವಸೆ ನೀಡಿದರು.</p>.<p>ಮುಖಂಡರಾದ ಸೋಮಸುಂದರರೆಡ್ಡಿ, ಕರ್ನಾಟಕ ಸಿಂಹ ಘರ್ಜನೆ ವೇದಿಕೆಯ ಪ್ರಸನ್ನಕುಮಾರ ಸ್ವಾಮಿ, ಮಂಜುನಾಥ್, ಯುಗೇಂದ್ರ, ಶ್ರೀನಿವಾಸರೆಡ್ಡಿ, ಕೆಆರ್ಎಸ್ ಸಂಘಟನೆಯ ರಮೇಶ್, ಪೌಲ್, ಮಂಜುನಾಥ್, ವಿಜಯರೆಡ್ಡಿ, ಗ್ರಾಮದ ಮುಖಂಡರಾದ ರಾಜಾರೆಡ್ಡಿ, ಮಂಜುನಾಥ ರೆಡ್ಡಿ, ರಾಮರೆಡ್ಡಿ, ಅಮರೇಶ್, ಕಣ್ಣಪ್ಪ, ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>