<p><strong>ಕೋಲಾರ:</strong> ಜಿಲ್ಲೆಯ ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೌಷ್ಟಿಕಾಂಶ ವೃದ್ಧಿಯ ಉದ್ದೇಶದಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಎಂ.ಆರ್.ರವಿ ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿದರು.</p>.<p>ಮಕ್ಕಳಲ್ಲಿನ ರಕ್ತಹೀನತೆ ತಡೆಗಟ್ಟಲು ಮತ್ತು ದೈಹಿಕ, ಮಾನಸಿಕ ಬೆಳವಣಿಗೆಗೆ ಜಂತುಹುಳು ನಿವಾರಣೆ ಅತ್ಯಗತ್ಯ. ಜಿಲ್ಲೆಯ ಪ್ರತಿಯೊಬ್ಬ ಮಗುವೂ ಈ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ 1 ರಿಂದ 19 ವರ್ಷದೊಳಗಿನ ಒಟ್ಟು 4,61,633 ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದರು.</p>.<p>ಮಾತ್ರೆ ವಿತರಣೆ ಆರಂಭವಾಗಿದ್ದು, ಫೆ.16 ರಂದು ‘ಮಾಪ್-ಅಪ್’ ದಿನವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.</p>.<p>ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಶ್ರೀನಿವಾಸ್, ಆರ್ಸಿಎಚ್ ಅಧಿಕಾರಿ ಡಾ.ಚಾರಿಣಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯ ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೌಷ್ಟಿಕಾಂಶ ವೃದ್ಧಿಯ ಉದ್ದೇಶದಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಎಂ.ಆರ್.ರವಿ ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿದರು.</p>.<p>ಮಕ್ಕಳಲ್ಲಿನ ರಕ್ತಹೀನತೆ ತಡೆಗಟ್ಟಲು ಮತ್ತು ದೈಹಿಕ, ಮಾನಸಿಕ ಬೆಳವಣಿಗೆಗೆ ಜಂತುಹುಳು ನಿವಾರಣೆ ಅತ್ಯಗತ್ಯ. ಜಿಲ್ಲೆಯ ಪ್ರತಿಯೊಬ್ಬ ಮಗುವೂ ಈ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ 1 ರಿಂದ 19 ವರ್ಷದೊಳಗಿನ ಒಟ್ಟು 4,61,633 ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದರು.</p>.<p>ಮಾತ್ರೆ ವಿತರಣೆ ಆರಂಭವಾಗಿದ್ದು, ಫೆ.16 ರಂದು ‘ಮಾಪ್-ಅಪ್’ ದಿನವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.</p>.<p>ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಶ್ರೀನಿವಾಸ್, ಆರ್ಸಿಎಚ್ ಅಧಿಕಾರಿ ಡಾ.ಚಾರಿಣಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>