<p><strong>ಕೆಜಿಎಫ್:</strong> ‘ಮಾತೃಭಾಷೆಯನ್ನು ಪ್ರೇಮಿಸುತ್ತಿದ್ದರೂ, ದೇಶದ ವಿಷಯ ಬಂದಾಗ ಎಲ್ಲಾ ಭಾಷಿಕರು ಒಂದೇ ಎನ್ನುವ ಭಾವನೆಯನ್ನು ಭಾರತೀಯರು ಹೊಂದಿದ್ದಾರೆ. ಇದು ವಿವಿಧತೆಯಲ್ಲಿ ಏಕತೆಯ ದ್ಯೋತಕ’ ಎಂದು ನ್ಯಾಯಾಧೀಶ ದಯಾನಂದ ಹಿರೇಮಠ ಹೇಳಿದರು.</p>.<p>ರಾಬರ್ಟಸನ್ಪೇಟೆಯ ವಿವೇಕಾನಂದ ಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ಏಕತಾ ದಿನಾಚರಣೆ ಮತ್ತು ಭಾಷಾ ಸೌಹಾರ್ದ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೆಜಿಎಫ್ ನಗರದಲ್ಲಿ ವಿವಿಧ ಭಾಷೆ ಮಾತನಾಡುವ ಜನ ಹೆಚ್ಚಾಗಿದ್ದಾರೆ. ಆದರೆ ಎಲ್ಲರೂ ಅಣ್ಣ, ತಮ್ಮಂದಿರ ರೀತಿಯಲ್ಲಿ ಬಾಳ್ವೆ ಮಾಡುತ್ತಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಿದೆ. ಭಾಷೆ ಮತ್ತು ದೇಶದ ಬಗ್ಗೆ ನಾವು ತೋರುತ್ತಿರುವ ಪ್ರೀತಿಯನ್ನು ಇದು ತೋರಿಸುತ್ತದೆ ಎಂದು ಹೇಳಿದರು.</p>.<p>ನ್ಯಾಯಾಧೀಶೆ ಎಂ.ಡಿ. ರೂಪಾ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಸಿ. ನಾಗರಾಜ್,ಕನ್ನಡ ಸಂಘ, ತಮಿಳು ಸಂಘ ಮತ್ತು ಮಲಯಾಳಿ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ‘ಮಾತೃಭಾಷೆಯನ್ನು ಪ್ರೇಮಿಸುತ್ತಿದ್ದರೂ, ದೇಶದ ವಿಷಯ ಬಂದಾಗ ಎಲ್ಲಾ ಭಾಷಿಕರು ಒಂದೇ ಎನ್ನುವ ಭಾವನೆಯನ್ನು ಭಾರತೀಯರು ಹೊಂದಿದ್ದಾರೆ. ಇದು ವಿವಿಧತೆಯಲ್ಲಿ ಏಕತೆಯ ದ್ಯೋತಕ’ ಎಂದು ನ್ಯಾಯಾಧೀಶ ದಯಾನಂದ ಹಿರೇಮಠ ಹೇಳಿದರು.</p>.<p>ರಾಬರ್ಟಸನ್ಪೇಟೆಯ ವಿವೇಕಾನಂದ ಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ಏಕತಾ ದಿನಾಚರಣೆ ಮತ್ತು ಭಾಷಾ ಸೌಹಾರ್ದ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೆಜಿಎಫ್ ನಗರದಲ್ಲಿ ವಿವಿಧ ಭಾಷೆ ಮಾತನಾಡುವ ಜನ ಹೆಚ್ಚಾಗಿದ್ದಾರೆ. ಆದರೆ ಎಲ್ಲರೂ ಅಣ್ಣ, ತಮ್ಮಂದಿರ ರೀತಿಯಲ್ಲಿ ಬಾಳ್ವೆ ಮಾಡುತ್ತಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಿದೆ. ಭಾಷೆ ಮತ್ತು ದೇಶದ ಬಗ್ಗೆ ನಾವು ತೋರುತ್ತಿರುವ ಪ್ರೀತಿಯನ್ನು ಇದು ತೋರಿಸುತ್ತದೆ ಎಂದು ಹೇಳಿದರು.</p>.<p>ನ್ಯಾಯಾಧೀಶೆ ಎಂ.ಡಿ. ರೂಪಾ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಸಿ. ನಾಗರಾಜ್,ಕನ್ನಡ ಸಂಘ, ತಮಿಳು ಸಂಘ ಮತ್ತು ಮಲಯಾಳಿ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>