‘ಪೈಪ್ಲೈನ್ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ ಯರಗೋಳ್ ಯೋಜನೆ ಮೂಲಕ ಜಿಲ್ಲಾ ಕೇಂದ್ರಕ್ಕೆ ನೀರಿನ ಸೌಕರ್ಯ ಕಲ್ಪಿಸುತ್ತೇವೆ. ನಗರದಲ್ಲಿ ಪ್ರತಿನಿತ್ಯ ಸುಮಾರು 70 ಟನ್ ಕಸ ಉತ್ಪತ್ತಿಯಾಗುತ್ತಿದ್ದು, ತ್ಯಾಜ್ಯ ವಿಲೇವಾರಿಗೆ ಮುಳಬಾಗಿಲು ತಾಲ್ಲೂಕಿನ ಪೊಂಬರಹಳ್ಳಿ ಬಳಿ ಜಾಗ ಗುರುತಿಸಲಾಗಿದೆ. 35 ವಾರ್ಡ್ಗಳಲ್ಲಿ ಜನರ ಮನೆ ಬಾಗಿಲಲ್ಲೇ ಆಟೊಗಳ ಮೂಲಕ ಕಸ ಸಂಗ್ರಹಿಸಲಾಗುತ್ತಿದೆ’ ಎಂದು ವಿವರಿಸಿದರು.