<p><strong>ಕೋಲಾರ:</strong> ಬೆಂಗಳೂರು–ತಿರುಪತಿ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಅಪಘಾತ ತಪ್ಪಿಸಲು ವೇಗ ನಿಯಂತ್ರಣ ದೃಷ್ಟಿಯಿಂದ ಸ್ಪೀಡೊ ಮೀಟರ್ ಅಳವಡಿಸಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನಗಳ ಮೇಲೆ ನಿಗಾ ಇಡಲಿದೆ. ಸದ್ಯಕ್ಕೆ ಪರಿಗಣಿಸುತ್ತಿಲ್ಲ ಎಂದು ಸಂಸದ ಎಂ.ಮಲ್ಲೇಶ್ ಬಾಬು ಹೇಳಿದರು.</p>.<p>ತಾಲ್ಲೂಕಿನ ನರಸಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿರುವ ಶನಿವಾರ ಫ್ಲೈಓವರ್ಗೆ (ಮೇಲ್ಸೇತುವೆ) ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಹೆದ್ದಾರಿ –75ರ ನರಸಾಪುರ-ಬೆಳ್ಳೂರುವರೆಗೆ ₹28 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 1.8 ಕಿ.ಮೀ ಉದ್ಘಾಟಿಸಲಾಗಿದೆ. ಇದರಿಂದ ವಾಹನಗಳ ಸರಾಗ ಸಂಚಾರಕ್ಕೆ ಅನುಕೂಲವಾಗಲಿದೆ. ನರಸಾಪುರ ಸಮೀಪ ನಿರ್ಮಿಸಿರುವ ಮತ್ತೊಂದು ಪ್ಲೈ ಓವರ್ ಅನ್ನು ಸಹ ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು ಎಂದರು.</p>.<p>ಇದರ ಜತೆಗೆ ನರಸಿಂಹತೀರ್ಥ, ನಂಗಲಿ, ವಡ್ಡಹಳ್ಳಿ, ವಡಗೂರು ಬಳಿ ನಿರ್ಮಾಣ ಹಂತದಲ್ಲಿರುವ ಪ್ಲೈಓವರ್ಗಳ ಕಾಮಗಾರಿ ಮುಗಿಸಿ ಲೋಕಾರ್ಪಣೆಗೊಳಿಸಲಾಗುವುದು. ಈ ಎಲ್ಲ ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲ ಶಾಸಕರು, ಜನಪ್ರತಿನಿಧಿಗಳು ಸಹಕಾರ ನೀಡಿದ್ದು, ಮಾಜಿ ಸಂಸದ ಎಸ್.ಮುನಿಸ್ವಾಮಿ ಅವರು ಹೆಚ್ಚಿನ ಶ್ರಮ ಹಾಕಿದ್ದರು. ಅವರು ಸಂಸದರಾಗಿದ್ದ ಅವಧಿಯಲ್ಲಿ ಕಾಮಗಾರಿ ಮಂಜೂರಾಗಿತ್ತು ಎಂದು ಸ್ಮರಿಸಿದರು.</p>.<p>23 ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಲಾಗಿದೆ. ಈ ಸಮಸ್ಯೆ ಬಗೆಹರಿಸುವ ಕುರಿತಾಗಿ ಕ್ರಿಯಾಯೋಜನೆಗೆ ಪ್ರಸ್ತಾವನೆ ಸಲ್ಲಿಸಿ ಮುಂದಿನ ವಾರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದರು.</p>.<p>ಮನರೇಗಾ ಹೆಸರು ಬದಲಾವಣೆ ಸಂಬಂಧ ಸಂಸತ್ತಿನಲ್ಲಿ ಚರ್ಚೆ ನಡೆದು ಮಸೂದೆಗೆ ಒಪ್ಪಿಗೆ ಲಭಿಸಿದೆ. ಅದರ ಬಗ್ಗೆ ಮಾತನಾಡುವ ಅಗತ್ಯವೂ ಇಲ್ಲ, ಹೆಸರು ಬದಲಾವಣೆ ವಿಚಾರಕ್ಕೆ ಆದ್ಯತೆ ನೀಡುವ ಅವಶ್ಯವಿಲ್ಲ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಮುಖಂಡ ವಿಜಯ್ ಕುಮಾರ್, ತಾಲ್ಲೂಕು ಅಧ್ಯಕ್ಷ ಬಾಬು ಮೌನಿ, ಕೆಡಿಪಿ ಸದಸ್ಯ ಇರಗಸಂದ್ರ ವಿಶ್ವನಾಥ್ ಇದ್ದರು.</p>.<p> <strong>ಜನರ ಹಿತದೃಷ್ಟಿಯಿಂದ ಮೈತ್ರಿ </strong></p><p>ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಅನಿವಾರ್ಯವಲ್ಲ. ಆದರೆ ರಾಜ್ಯದ ಜನರ ಭವಿಷ್ಯ ಹಾಗೂ ಅವರ ಹಿತದೃಷ್ಟಿಯಿಂದ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ಮೈತ್ರಿ ಸದಾ ಗಟ್ಟಿಯಾಗಿಯೇ ಇರುತ್ತದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಅಧಿಕಾರಕ್ಕೆ ಬರಲಿದ್ದು ಮೈತ್ರಿ ಪಕ್ಷದವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಲ್ಲೇಶ್ ಬಾಬು ಹೇಳಿದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಪಕ್ಷದ ಚಿಹ್ನೆ ಇರುವುದಿಲ್ಲ. ಹೀಗಾಗಿ ಆ ವಿಚಾರದಲ್ಲಿ ಮೈತ್ರಿ ಇರುವುದಿಲ್ಲವೆಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿರಬಹುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ತಾಲ್ಲೂಕು ಜಿಲ್ಲಾ ಪಂಚಾಯಿತಿ ಜಿಬಿಎ (ಬಿಬಿಎಂಪಿ) ಚುನಾವಣೆ ನಡೆಯಬೇಕಿದೆ. ಅದು ಯಾವಾಗ ಎಂಬುದೇ ಗೊತ್ತಿಲ್ಲ. ಮೈತ್ರಿ ಸಂಬಂಧ ವರಿಷ್ಠರ ನಿಲುವಿಗೆ ಬದ್ಧ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಬೆಂಗಳೂರು–ತಿರುಪತಿ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಅಪಘಾತ ತಪ್ಪಿಸಲು ವೇಗ ನಿಯಂತ್ರಣ ದೃಷ್ಟಿಯಿಂದ ಸ್ಪೀಡೊ ಮೀಟರ್ ಅಳವಡಿಸಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನಗಳ ಮೇಲೆ ನಿಗಾ ಇಡಲಿದೆ. ಸದ್ಯಕ್ಕೆ ಪರಿಗಣಿಸುತ್ತಿಲ್ಲ ಎಂದು ಸಂಸದ ಎಂ.ಮಲ್ಲೇಶ್ ಬಾಬು ಹೇಳಿದರು.</p>.<p>ತಾಲ್ಲೂಕಿನ ನರಸಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿರುವ ಶನಿವಾರ ಫ್ಲೈಓವರ್ಗೆ (ಮೇಲ್ಸೇತುವೆ) ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಹೆದ್ದಾರಿ –75ರ ನರಸಾಪುರ-ಬೆಳ್ಳೂರುವರೆಗೆ ₹28 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 1.8 ಕಿ.ಮೀ ಉದ್ಘಾಟಿಸಲಾಗಿದೆ. ಇದರಿಂದ ವಾಹನಗಳ ಸರಾಗ ಸಂಚಾರಕ್ಕೆ ಅನುಕೂಲವಾಗಲಿದೆ. ನರಸಾಪುರ ಸಮೀಪ ನಿರ್ಮಿಸಿರುವ ಮತ್ತೊಂದು ಪ್ಲೈ ಓವರ್ ಅನ್ನು ಸಹ ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು ಎಂದರು.</p>.<p>ಇದರ ಜತೆಗೆ ನರಸಿಂಹತೀರ್ಥ, ನಂಗಲಿ, ವಡ್ಡಹಳ್ಳಿ, ವಡಗೂರು ಬಳಿ ನಿರ್ಮಾಣ ಹಂತದಲ್ಲಿರುವ ಪ್ಲೈಓವರ್ಗಳ ಕಾಮಗಾರಿ ಮುಗಿಸಿ ಲೋಕಾರ್ಪಣೆಗೊಳಿಸಲಾಗುವುದು. ಈ ಎಲ್ಲ ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲ ಶಾಸಕರು, ಜನಪ್ರತಿನಿಧಿಗಳು ಸಹಕಾರ ನೀಡಿದ್ದು, ಮಾಜಿ ಸಂಸದ ಎಸ್.ಮುನಿಸ್ವಾಮಿ ಅವರು ಹೆಚ್ಚಿನ ಶ್ರಮ ಹಾಕಿದ್ದರು. ಅವರು ಸಂಸದರಾಗಿದ್ದ ಅವಧಿಯಲ್ಲಿ ಕಾಮಗಾರಿ ಮಂಜೂರಾಗಿತ್ತು ಎಂದು ಸ್ಮರಿಸಿದರು.</p>.<p>23 ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಲಾಗಿದೆ. ಈ ಸಮಸ್ಯೆ ಬಗೆಹರಿಸುವ ಕುರಿತಾಗಿ ಕ್ರಿಯಾಯೋಜನೆಗೆ ಪ್ರಸ್ತಾವನೆ ಸಲ್ಲಿಸಿ ಮುಂದಿನ ವಾರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದರು.</p>.<p>ಮನರೇಗಾ ಹೆಸರು ಬದಲಾವಣೆ ಸಂಬಂಧ ಸಂಸತ್ತಿನಲ್ಲಿ ಚರ್ಚೆ ನಡೆದು ಮಸೂದೆಗೆ ಒಪ್ಪಿಗೆ ಲಭಿಸಿದೆ. ಅದರ ಬಗ್ಗೆ ಮಾತನಾಡುವ ಅಗತ್ಯವೂ ಇಲ್ಲ, ಹೆಸರು ಬದಲಾವಣೆ ವಿಚಾರಕ್ಕೆ ಆದ್ಯತೆ ನೀಡುವ ಅವಶ್ಯವಿಲ್ಲ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಮುಖಂಡ ವಿಜಯ್ ಕುಮಾರ್, ತಾಲ್ಲೂಕು ಅಧ್ಯಕ್ಷ ಬಾಬು ಮೌನಿ, ಕೆಡಿಪಿ ಸದಸ್ಯ ಇರಗಸಂದ್ರ ವಿಶ್ವನಾಥ್ ಇದ್ದರು.</p>.<p> <strong>ಜನರ ಹಿತದೃಷ್ಟಿಯಿಂದ ಮೈತ್ರಿ </strong></p><p>ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಅನಿವಾರ್ಯವಲ್ಲ. ಆದರೆ ರಾಜ್ಯದ ಜನರ ಭವಿಷ್ಯ ಹಾಗೂ ಅವರ ಹಿತದೃಷ್ಟಿಯಿಂದ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ಮೈತ್ರಿ ಸದಾ ಗಟ್ಟಿಯಾಗಿಯೇ ಇರುತ್ತದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಅಧಿಕಾರಕ್ಕೆ ಬರಲಿದ್ದು ಮೈತ್ರಿ ಪಕ್ಷದವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಲ್ಲೇಶ್ ಬಾಬು ಹೇಳಿದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಪಕ್ಷದ ಚಿಹ್ನೆ ಇರುವುದಿಲ್ಲ. ಹೀಗಾಗಿ ಆ ವಿಚಾರದಲ್ಲಿ ಮೈತ್ರಿ ಇರುವುದಿಲ್ಲವೆಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿರಬಹುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ತಾಲ್ಲೂಕು ಜಿಲ್ಲಾ ಪಂಚಾಯಿತಿ ಜಿಬಿಎ (ಬಿಬಿಎಂಪಿ) ಚುನಾವಣೆ ನಡೆಯಬೇಕಿದೆ. ಅದು ಯಾವಾಗ ಎಂಬುದೇ ಗೊತ್ತಿಲ್ಲ. ಮೈತ್ರಿ ಸಂಬಂಧ ವರಿಷ್ಠರ ನಿಲುವಿಗೆ ಬದ್ಧ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>