ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಆದೇಶಕ್ಕೆ ಜನ ಬೆಂಬಲ ವ್ಯಕ್ತವಾಗಿದ್ದು, ವರ್ತಕರು ರಾತ್ರಿ 9ಕ್ಕೂ ಮುನ್ನವೇ ಸ್ವಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿ ವಹಿವಾಟು ಸ್ಥಗಿತಗೊಳಿಸಿದರು. ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಕರ್ಫ್ಯೂ ಅವಧಿ ಜಾರಿಗೂ ಮುನ್ನವೇ ತಮ್ಮ ಮನೆಗಳಿಗೆ ತೆರಳಿ ಕರ್ಫ್ಯೂಗೆ ಬೆಂಬಲ ಸೂಚಿಸಿದರು.