<p><strong>ಕೋಲಾರ:</strong> ‘ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಮಂಗಳವಾರದಿಂದ (ಡಿ.28) 10 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ತಿಳಿಸಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ಕರ್ಫ್ಯೂ ಇರುತ್ತದೆ. ರಾತ್ರಿ 10ರ ನಂತರ ಜಿಲ್ಲೆಯಾದ್ಯಂತ ಕಡ್ಡಾಯವಾಗಿ ಬಾರ್, ರೆಸ್ಟೋರೆಂಟ್ ಸೇರಿದಂತೆ ಎಲ್ಲಾ ಮದ್ಯದಂಗಡಿಗಳು ಹಾಗೂ ಹೋಟೆಲ್ಗಳನ್ನು ಬಂದ್ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಸರ್ಕಾರದ ಕೋವಿಡ್ ಸುರಕ್ಷತಾ ಮಾರ್ಗಸೂಚಿ ಪಾಲನೆ ಕಡ್ಡಾಯ. ರಾತ್ರಿ ಕರ್ಫ್ಯೂ ವೇಳೆ ಕೋವಿಡ್ ನಿಯಮಾವಳಿ ಮೀರಿ ಜನರು ಗುಂಪು ಸೇರಿ ಅಥವಾ ಔತಣ ಕೂಟ ನಡೆಸಿ ಹೊಸ ವರ್ಷಾಚರಣೆ ಮಾಡಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಹಿಂದಿನ ವರ್ಷ ಜಿಲ್ಲೆಯ ಎಲ್ಲೆಲ್ಲಿ ಜನರ ಗುಂಪು ಸೇರಿಸಿ ಅದ್ಧೂರಿಯಾಗಿ ಹೊಸ ವರ್ಷ ಆಚರಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಆ ಭಾಗದಲ್ಲಿ ಈ ಬಾರಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ. ಸರ್ಕಾರ ಕೋವಿಡ್ ನಿಯಮಾವಳಿ ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಪೊಲೀಸ್ ಇಲಾಖೆ ಜತೆ ಚರ್ಚಿಸಲಾಗಿದೆ’ ಎಂದು ವಿವರಿಸಿದರು.</p>.<p>ಸಕಲ ಸಿದ್ಧತೆ: ‘ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಜನರಿಗೆ ಅರಿವು ಮೂಡಿಸುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಮಾರ್ಗಸೂಚಿ ಉಲ್ಲಂಘಿಸಿದರೆ ಖಂಡಿತ ಪ್ರಕರಣ ದಾಖಲಿಸುತ್ತೇವೆ. ಜಿಲ್ಲೆಯಲ್ಲಿ ಈವರೆಗೆ ಓಮೈಕ್ರಾನ್ ಸೋಂಕು ಪತ್ತೆಯಾಗಿಲ್ಲ. ಸರ್ಕಾರದ ಸೂಚನೆಯಂತೆ ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಲ್ಲಾ ಕೇಂದ್ರದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಸೇರಿದಂತೆ 33 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಸೋಂಕಿತ ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಕಂಟೈನ್ಮೆಂಟ್ ವಲಯವಾಗಿ ಘೋಷಿಸಲಾಗಿದೆ’ ಎಂದರು.</p>.<p>‘ಸೋಂಕಿತರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಓಮೈಕ್ರಾನ್ ಸೋಂಕು ತಗುಲಿದೆಯೇ ಎಂಬುದು ಪ್ರಯೋಗಾಲಯದ ವರದಿ ಬಂದ ನಂತರ ಗೊತ್ತಾಗುತ್ತದೆ. ಮೂರ್ನಾಲ್ಕು ದಿನದಲ್ಲಿ ವೈದ್ಯಕೀಯ ವರದಿ ಬರುವ ನಿರೀಕ್ಷೆಯಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಜವಾಬ್ದಾರಿಯನ್ನು ಆರೋಗ್ಯ ಇಲಾಖೆಗೆ ವಹಿಸಲಾಗಿದೆ. ಪ್ರತಿನಿತ್ಯ ಸುಮಾರು 3 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ಮಾಡುವ ಗುರಿ ನೀಡಲಾಗಿದೆ. ಜನರು ಮಾಸ್ಕ್ ಧರಿಸದ ಬಗ್ಗೆ ಮತ್ತು ಅಂತರ ಕಾಪಾಡದೆ ಗುಂಪುಗೂಡುತ್ತಿರುವ ಬಗ್ಗೆ ದೂರು ಬಂದಿವೆ. ಈ ಬಗ್ಗೆ ನಿಗಾ ವಹಿಸಿ ದಂಡ ವಿಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಮಂಗಳವಾರದಿಂದ (ಡಿ.28) 10 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ತಿಳಿಸಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ಕರ್ಫ್ಯೂ ಇರುತ್ತದೆ. ರಾತ್ರಿ 10ರ ನಂತರ ಜಿಲ್ಲೆಯಾದ್ಯಂತ ಕಡ್ಡಾಯವಾಗಿ ಬಾರ್, ರೆಸ್ಟೋರೆಂಟ್ ಸೇರಿದಂತೆ ಎಲ್ಲಾ ಮದ್ಯದಂಗಡಿಗಳು ಹಾಗೂ ಹೋಟೆಲ್ಗಳನ್ನು ಬಂದ್ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಸರ್ಕಾರದ ಕೋವಿಡ್ ಸುರಕ್ಷತಾ ಮಾರ್ಗಸೂಚಿ ಪಾಲನೆ ಕಡ್ಡಾಯ. ರಾತ್ರಿ ಕರ್ಫ್ಯೂ ವೇಳೆ ಕೋವಿಡ್ ನಿಯಮಾವಳಿ ಮೀರಿ ಜನರು ಗುಂಪು ಸೇರಿ ಅಥವಾ ಔತಣ ಕೂಟ ನಡೆಸಿ ಹೊಸ ವರ್ಷಾಚರಣೆ ಮಾಡಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಹಿಂದಿನ ವರ್ಷ ಜಿಲ್ಲೆಯ ಎಲ್ಲೆಲ್ಲಿ ಜನರ ಗುಂಪು ಸೇರಿಸಿ ಅದ್ಧೂರಿಯಾಗಿ ಹೊಸ ವರ್ಷ ಆಚರಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಆ ಭಾಗದಲ್ಲಿ ಈ ಬಾರಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ. ಸರ್ಕಾರ ಕೋವಿಡ್ ನಿಯಮಾವಳಿ ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಪೊಲೀಸ್ ಇಲಾಖೆ ಜತೆ ಚರ್ಚಿಸಲಾಗಿದೆ’ ಎಂದು ವಿವರಿಸಿದರು.</p>.<p>ಸಕಲ ಸಿದ್ಧತೆ: ‘ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಜನರಿಗೆ ಅರಿವು ಮೂಡಿಸುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಮಾರ್ಗಸೂಚಿ ಉಲ್ಲಂಘಿಸಿದರೆ ಖಂಡಿತ ಪ್ರಕರಣ ದಾಖಲಿಸುತ್ತೇವೆ. ಜಿಲ್ಲೆಯಲ್ಲಿ ಈವರೆಗೆ ಓಮೈಕ್ರಾನ್ ಸೋಂಕು ಪತ್ತೆಯಾಗಿಲ್ಲ. ಸರ್ಕಾರದ ಸೂಚನೆಯಂತೆ ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಲ್ಲಾ ಕೇಂದ್ರದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಸೇರಿದಂತೆ 33 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಸೋಂಕಿತ ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಕಂಟೈನ್ಮೆಂಟ್ ವಲಯವಾಗಿ ಘೋಷಿಸಲಾಗಿದೆ’ ಎಂದರು.</p>.<p>‘ಸೋಂಕಿತರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಓಮೈಕ್ರಾನ್ ಸೋಂಕು ತಗುಲಿದೆಯೇ ಎಂಬುದು ಪ್ರಯೋಗಾಲಯದ ವರದಿ ಬಂದ ನಂತರ ಗೊತ್ತಾಗುತ್ತದೆ. ಮೂರ್ನಾಲ್ಕು ದಿನದಲ್ಲಿ ವೈದ್ಯಕೀಯ ವರದಿ ಬರುವ ನಿರೀಕ್ಷೆಯಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಜವಾಬ್ದಾರಿಯನ್ನು ಆರೋಗ್ಯ ಇಲಾಖೆಗೆ ವಹಿಸಲಾಗಿದೆ. ಪ್ರತಿನಿತ್ಯ ಸುಮಾರು 3 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ಮಾಡುವ ಗುರಿ ನೀಡಲಾಗಿದೆ. ಜನರು ಮಾಸ್ಕ್ ಧರಿಸದ ಬಗ್ಗೆ ಮತ್ತು ಅಂತರ ಕಾಪಾಡದೆ ಗುಂಪುಗೂಡುತ್ತಿರುವ ಬಗ್ಗೆ ದೂರು ಬಂದಿವೆ. ಈ ಬಗ್ಗೆ ನಿಗಾ ವಹಿಸಿ ದಂಡ ವಿಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>