‘ಯುದ್ಧ ಭೂಮಿಯಲ್ಲಿ ಕೆಲಸ ಮಾಡಬೇಕು, ದೇಶ ಸೇವೆ ಮಾಡಬೇಕೆಂಬ ಇಚ್ಛೆಯಿಂದ ನಾಲ್ಕು ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದ. ಆಗ ಆತನಿಗೆ ಕೇವಲ 18 ವರ್ಷ. ತಾನಂದುಕೊಂಡಂತೇ ಒಂದೊಂದೇ ಗುರಿ ಸಾಧಿಸಿ ಹೆತ್ತವರ ಆಸೆ ಆಕಾಂಕ್ಷೆ ಈಡೇರಿಸುತ್ತಿದ್ದ. ಆದರೆ, ಈಗ ದುರಂತದಲ್ಲಿ ಅಂತ್ಯಗೊಂಡಿದೆ’ ಎಂದು ಸಂಬಂಧಿಕರು ಹೇಳಿದರು.