<p><strong>ಕೋಲಾರ:</strong> ರಾಜ್ಯದಲ್ಲಿ ಜೆಡಿಎಸ್ ಬೆಳೆಸಿದ್ದೇ ಜೆಡಿಯು. ಈಗ ಜೆಡಿಎಸ್ ಮುಖಂಡರ ಬೆಂಬಲದೊಂದಿಗೆ ರಾಜ್ಯದಲ್ಲಿ ಮತ್ತೆ ಜೆಡಿಯು ಪಕ್ಷ ಕಟ್ಟಿ ಬೆಳೆಸಲಾಗುವುದು. ಈ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸದ್ಯದಲ್ಲೇ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ಮಹಿಮ ಜೆ.ಪಟೇಲ್ ತಿಳಿಸಿದರು.</p>.<p>ತಾಲ್ಲೂಕಿನ ಕಲ್ಲಂಡೂರಿನಲ್ಲಿ ಮಂಗಳವಾರ ಜೆಡಿಯು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಜನತಾ ಪರಿವಾರ ರಾಜ್ಯದಲ್ಲಿ ಹಿಂದೆ ಉತ್ತಮ ಆಡಳಿತ ನಡೆಸಿದೆ. ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮ್ಮಾಯಿ, ಎಚ್.ಡಿ.ದೇವೇಗೌಡ, ಜೆ.ಎಚ್.ಪಟೇಲ್ ಉತ್ತಮ ಸರ್ಕಾರ ನೀಡಿದ್ದಾರೆ. ಅವರು ಹಾಕಿಕೊಟ್ಟ ಅಡಿಪಾಯದ ಮೇಲೆ ರಾಜ್ಯದಲ್ಲಿ ಜೆಡಿಯು ಪಕ್ಷಕ್ಕೆ ಪುನಶ್ಚೇತನ ನೀಡಲಾಗುವುದು ಎಂದರು.</p>.<p>ಬೇರೆ ಬೇರೆ ಪಕ್ಷಗಳ ಪರಿಸ್ಥಿತಿ ನೋಡಿ ಆ ಪಕ್ಷಗಳು ಬೇಡ ಎಂಬ ತೀರ್ಮಾನಕ್ಕೆ ಹಲವು ನಾಯಕರು ಬಂದಿದ್ದಾರೆ. ರಾಜಕೀಯ ನಾಯಕರು ಅಲ್ಲದೇ; ಕಲಾವಿದರು, ಸಾಹಿತಿಗಳು, ವಿವಿಧ ಕ್ಷೇತ್ರಗಳ ಮುಖಂಡರು ನಮ್ಮ ಪಕ್ಷದ ಕಡೆ ನೋಡುತ್ತಿದ್ದಾರೆ ಎಂದು ಹೇಳಿದರು.</p>.<p>ಈಗಿನ ರಾಜಕೀಯ ವ್ಯವಸ್ಥೆಯಿಂದ ಜನರು ಗೊಂದಲ, ಅಸಹಾಯಕತೆ, ನಿರಾಶೆಯ ಭಾವನೆಯಲ್ಲಿದ್ದಾರೆ. ದೇಶದ 140 ಕೋಟಿ ಜನರಲ್ಲಿ ಕೇವಲ 3 ಲಕ್ಷ ಜನ ತೃಪ್ತಿಯಿಂದ ಇರಬಹುದು ಅಷ್ಟೆ. ಹೊಸ ವ್ಯವಸ್ಥೆ ಉದಯವಾಗಲು ಇದು ಸಕಾಲ ಎನಿಸುತ್ತಿದೆ. ವ್ಯವಸ್ಥೆಯ ಪರಿವರ್ತನೆ ಮಾಡಿ ಸುವ್ಯವಸ್ಥೆ ರೂಪಿಸಬೇಕಿದೆ. ಇದಕ್ಕೆ ತಿಳುವಳಿಕೆ ಹೊಂದಿರುವವರು, ಬುದ್ಧಿವಂತರು ಜನಪ್ರತಿನಿಧಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಈ ನಿಟ್ಟಿನಲ್ಲಿ ಡಾ.ನಾಗರಾಜ್ ಅವರನ್ನು ಆಗ್ನೇಯ ಪದವೀಧರ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಅವರನ್ನು ಎನ್ಡಿಎ ಬೆಂಬಲ ಅಥವಾ ಹೊರಗಿನಿಂದ ಬೆಂಬಲ ಪಡೆದು ಜೆಡಿಯುನಿಂದ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಿದರು.</p>.<p>ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ನಾಗರಾಜ್ ಮಾತನಾಡಿ, ‘ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಈಗಾಗಲೇ ಒಂದು ಸುತ್ತು ಮುಗಿಸಿ ಎರಡನೇ ಸುತ್ತಿನ ಪ್ರಚಾರದಲ್ಲಿ ತೊಡಗಿದ್ದೇವೆ. ಅತಿ ಹೆಚ್ಚು ಮತದಾರರನ್ನು ನೋಂದಣಿ ಮಾಡಿಸಿದ್ದೇವೆ’ ಎಂದರು.</p>.<p>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದವರು. ಬಿಹಾರದ ಸರ್ಕಾರದಲ್ಲಿ ಸಚಿವರಾದವರು. ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ, ಮುಂಬರುವ ದಿನಗಳಲ್ಲಿ ನಮಗೆ ಸಹಾಯವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ರಾಜ್ಯದಲ್ಲಿ ಜೆಡಿಎಸ್ ಬೆಳೆಸಿದ್ದೇ ಜೆಡಿಯು. ಈಗ ಜೆಡಿಎಸ್ ಮುಖಂಡರ ಬೆಂಬಲದೊಂದಿಗೆ ರಾಜ್ಯದಲ್ಲಿ ಮತ್ತೆ ಜೆಡಿಯು ಪಕ್ಷ ಕಟ್ಟಿ ಬೆಳೆಸಲಾಗುವುದು. ಈ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸದ್ಯದಲ್ಲೇ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ಮಹಿಮ ಜೆ.ಪಟೇಲ್ ತಿಳಿಸಿದರು.</p>.<p>ತಾಲ್ಲೂಕಿನ ಕಲ್ಲಂಡೂರಿನಲ್ಲಿ ಮಂಗಳವಾರ ಜೆಡಿಯು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಜನತಾ ಪರಿವಾರ ರಾಜ್ಯದಲ್ಲಿ ಹಿಂದೆ ಉತ್ತಮ ಆಡಳಿತ ನಡೆಸಿದೆ. ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮ್ಮಾಯಿ, ಎಚ್.ಡಿ.ದೇವೇಗೌಡ, ಜೆ.ಎಚ್.ಪಟೇಲ್ ಉತ್ತಮ ಸರ್ಕಾರ ನೀಡಿದ್ದಾರೆ. ಅವರು ಹಾಕಿಕೊಟ್ಟ ಅಡಿಪಾಯದ ಮೇಲೆ ರಾಜ್ಯದಲ್ಲಿ ಜೆಡಿಯು ಪಕ್ಷಕ್ಕೆ ಪುನಶ್ಚೇತನ ನೀಡಲಾಗುವುದು ಎಂದರು.</p>.<p>ಬೇರೆ ಬೇರೆ ಪಕ್ಷಗಳ ಪರಿಸ್ಥಿತಿ ನೋಡಿ ಆ ಪಕ್ಷಗಳು ಬೇಡ ಎಂಬ ತೀರ್ಮಾನಕ್ಕೆ ಹಲವು ನಾಯಕರು ಬಂದಿದ್ದಾರೆ. ರಾಜಕೀಯ ನಾಯಕರು ಅಲ್ಲದೇ; ಕಲಾವಿದರು, ಸಾಹಿತಿಗಳು, ವಿವಿಧ ಕ್ಷೇತ್ರಗಳ ಮುಖಂಡರು ನಮ್ಮ ಪಕ್ಷದ ಕಡೆ ನೋಡುತ್ತಿದ್ದಾರೆ ಎಂದು ಹೇಳಿದರು.</p>.<p>ಈಗಿನ ರಾಜಕೀಯ ವ್ಯವಸ್ಥೆಯಿಂದ ಜನರು ಗೊಂದಲ, ಅಸಹಾಯಕತೆ, ನಿರಾಶೆಯ ಭಾವನೆಯಲ್ಲಿದ್ದಾರೆ. ದೇಶದ 140 ಕೋಟಿ ಜನರಲ್ಲಿ ಕೇವಲ 3 ಲಕ್ಷ ಜನ ತೃಪ್ತಿಯಿಂದ ಇರಬಹುದು ಅಷ್ಟೆ. ಹೊಸ ವ್ಯವಸ್ಥೆ ಉದಯವಾಗಲು ಇದು ಸಕಾಲ ಎನಿಸುತ್ತಿದೆ. ವ್ಯವಸ್ಥೆಯ ಪರಿವರ್ತನೆ ಮಾಡಿ ಸುವ್ಯವಸ್ಥೆ ರೂಪಿಸಬೇಕಿದೆ. ಇದಕ್ಕೆ ತಿಳುವಳಿಕೆ ಹೊಂದಿರುವವರು, ಬುದ್ಧಿವಂತರು ಜನಪ್ರತಿನಿಧಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಈ ನಿಟ್ಟಿನಲ್ಲಿ ಡಾ.ನಾಗರಾಜ್ ಅವರನ್ನು ಆಗ್ನೇಯ ಪದವೀಧರ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಅವರನ್ನು ಎನ್ಡಿಎ ಬೆಂಬಲ ಅಥವಾ ಹೊರಗಿನಿಂದ ಬೆಂಬಲ ಪಡೆದು ಜೆಡಿಯುನಿಂದ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಿದರು.</p>.<p>ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ನಾಗರಾಜ್ ಮಾತನಾಡಿ, ‘ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಈಗಾಗಲೇ ಒಂದು ಸುತ್ತು ಮುಗಿಸಿ ಎರಡನೇ ಸುತ್ತಿನ ಪ್ರಚಾರದಲ್ಲಿ ತೊಡಗಿದ್ದೇವೆ. ಅತಿ ಹೆಚ್ಚು ಮತದಾರರನ್ನು ನೋಂದಣಿ ಮಾಡಿಸಿದ್ದೇವೆ’ ಎಂದರು.</p>.<p>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದವರು. ಬಿಹಾರದ ಸರ್ಕಾರದಲ್ಲಿ ಸಚಿವರಾದವರು. ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ, ಮುಂಬರುವ ದಿನಗಳಲ್ಲಿ ನಮಗೆ ಸಹಾಯವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>