ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಭ್ರಷ್ಠಾಚಾರ, ಅಕ್ರಮ ಸಂಪಾದನೆಗೆ ಸಂಬಂಧಿಸಿದಂತೆ ಸಾಕ್ಷಿ ಆಧಾರಗಳ ಸಮೇತ ಜಿಲ್ಲಾ ಪಂಚಾಯಿತಿ ಸಿಇಓ ಪದ್ಮಾ ಬಸವಂತಪ್ಪ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಹಲವು ಬಾರಿ ದೂರು ನೀಡಲಾಗಿದೆ. ಜತೆಗೆ ಪ್ರತಿಭಟನೆ ನಡೆಸಲಾಗಿದೆ. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಿರಿಯ ಅಧಿಕಾರಿಗಳ ನಡೆ ನೋಡಿದರೆ ಅವರು ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ನಿಂತಿದ್ದಾರೆ ಎಂಬ ಸಂಶಯ ಬರುತ್ತಿದೆ ಎಂದು ದೂರಿದರು.