ಒತ್ತುವರಿ ತೆರವು: ‘ಕೋಲಾರಮ್ಮ ಕೆರೆಯ ಮಾದರಿಯಲ್ಲೇ ಕೋಡಿಕಣ್ಣೂರು ಕೆರೆ ಸ್ವಚ್ಛಗೊಳಿಸಲಾಗುತ್ತಿದೆ. ಕೆರೆಯ ಬಹುತೇಕ ಜಾಗ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳು ಹಂತ ಹಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೆರೆ ಅಂಗಳದಲ್ಲಿ ಕೆಲವರು ಮನೆ ನಿರ್ಮಿಸಿಕೊಂಡಿದ್ದು, ಆ ಮನೆಗಳನ್ನು ಮುಲಾಜಿಲ್ಲದೆ ತೆರವು ಮಾಡುತ್ತೇವೆ’ ಎಂದರು.