ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪವಿಲ್ಲ: ಅಬಕಾರಿ ಸಚಿವ ಎಚ್. ನಾಗೇಶ್

Last Updated 24 ಜೂನ್ 2020, 13:13 IST
ಅಕ್ಷರ ಗಾತ್ರ

ಕೋಲಾರ: ‘ಅಬಕಾರಿ ಇಲಾಖೆ ವರ್ಗಾವಣೆ ಪ್ರಕ್ರಿಯೆಯಲ್ಲಿ ನನ್ನ ಮತ್ತು ಮಗನ ಹಸ್ತಕ್ಷೇಪವಿಲ್ಲ’ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದರು.

ತಾಲ್ಲೂಕಿನ ವಡಗೂರು ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಇಲಾಖೆಯಲ್ಲಿ ಯಾವುದೇ ಅಧಿಕಾರಿಯನ್ನು ವರ್ಗಾವಣೆ ಮಾಡಿಸಿಲ್ಲ. ಮುಖ್ಯಮಂತ್ರಿಯವರ ಆದೇಶದಂತೆ ಅವಶ್ಯಕತೆ ಇರುವ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.

‘ಇಲಾಖೆಯಲ್ಲಿನ ಕೆಲ ನಿಯೋಜನೆ ವರ್ಗಾವಣೆಗಳನ್ನು (ಡೆಪ್ಟೇಷನ್‌) ಇಲಾಖೆ ಆಯುಕ್ತರು ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ. ಈ ಪ್ರಕ್ರಿಯೆ ಅಧಿಕಾರಿಗಳ ಮಟ್ಟದಲ್ಲಿ ನಡೆಯುತ್ತಿದೆ. ಆದರೆ, ವರ್ಗಾವಣೆ ವಿಚಾರದಲ್ಲಿ ನನ್ನ ಮತ್ತು ನನ್ನ ಮಗನ ಹೆಸರು ಕೇಳಿ ಬಂದಿರುವುದು ಸತ್ಯಕ್ಕೆ ದೂರವಾದುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT