‘ಅಮೃತ್ ಸಿಟಿ ಯೋಜನೆಯಡಿ ಕೋಲಾರ ನಗರದಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಅವರ ನೇತೃತ್ವದಲ್ಲಿ ಜುಲೈ 7ರಂದು ಪರಿಶೀಲನೆ ನಡೆಸುತ್ತೇವೆ. ನಾನು ಮತ್ತು ಸ್ಥಳೀಯ ಶಾಸಕ ಕೆ.ಶ್ರೀನಿವಾಸಗೌಡರು ಹಾಜರಿರುತ್ತೇವೆ. ಕಾಮಗಾರಿ ಗುಣಮಟ್ಟ ಕಳಪೆ ಆಗಿರುವುದು ಕಂಡುಬಂದರೆ ಅದನ್ನು ಸರಿಪಡಿಸುವಂತೆ ಗುತ್ತಿಗೆದಾರರಿಗೆ ತಿಳಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.