<p><strong>ನವದೆಹಲಿ</strong>: ಭಾರತೀಯ ರಿಸರ್ವ್ ಬ್ಯಾಂಕ್, ಮುಂಬರುವ ದಿನಗಳಲ್ಲಿ ತನ್ನ ಅಲ್ಪಾವಧಿ ಬಡ್ಡಿ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇಲ್ಲ ಎಂದು ಹಣಕಾಸು ಸಚಿವಾಲಯ ನಿರೀಕ್ಷಿಸಿದೆ.</p>.<p>‘ಜೂನ್ ದ್ವೈಮಾಸಿಕ ಹಣಕಾಸು ಪರಾಮರ್ಶೆಯಲ್ಲಿ ಆರ್ಬಿಐ ಬಡ್ಡಿ ದರ ಹೆಚ್ಚಳವನ್ನು ಪರಿಗಣಿಸಲಿದೆ’ ಎಂದು ಡೆಪ್ಯುಟಿ ಗವರ್ನರ್ ವಿರಲ್ ಆಚಾರ್ಯ ಅವರು ಇಂಗಿತ ವ್ಯಕ್ತಪಡಿಸಿದ್ದರೂ, ಅಂತಹ ಪರಿಸ್ಥಿತಿ ಎದುರಾಗುವುದಿಲ್ಲ ಎಂದು ಸಚಿವಾಲಯ ಅಂದಾಜಿಸಿದೆ.</p>.<p>‘ಬಡ್ಡಿ ದರಗಳು ಈಗಾಗಲೇ ಗರಿಷ್ಠ ಮಟ್ಟದಲ್ಲಿ ಇವೆ. ಅವುಗಳು ಇನ್ನಷ್ಟು ಏರಿಕೆ ಆಗಲಿವೆಯೆಂದು ನನಗೆ ಅನಿಸುವುದಿಲ್ಲ’ ಎಂದು ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಏಪ್ರಿಲ್ ತಿಂಗಳಲ್ಲಿ ನಡೆದ ಹಣಕಾಸು ನೀತಿ ಸಮಿತಿಯ ಸಭೆಯ ನಡಾವಳಿಯ ಪ್ರಕಾರ, ಕಡಿಮೆ ಬಡ್ಡಿ ದರದ ಸುಲಭ ಹಣಕಾಸು ನೀತಿ ಕೈಬಿಡಬೇಕು ಎಂದು ಆರ್ಬಿಐ ಡೆಪ್ಯುಟಿ ಗವರ್ನರ್ ವಿರಲ್ ಆಚಾರ್ಯ ಅವರು ತಮ್ಮ ಅನಿಸಿಕೆ ದಾಖಲಿದ್ದಾರೆ. ಈ ನಿರ್ಧಾರಕ್ಕೆ ಬರುವ ಮೊದಲು ಕೇಂದ್ರೀಯ ಬ್ಯಾಂಕ್ ಇನ್ನಷ್ಟು ಸಮಯ ಕಾದು ನೋಡಬೇಕು ಎಂದು ಅವರು ಹೇಳಿದ್ದಾರೆ.</p>.<p>ಸಾಲ ಪಡೆಯುವ ಪ್ರಮಾಣದಲ್ಲಿ ನಿರಂತರವಾಗಿ ಪ್ರಗತಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಚೇತರಿಕೆ ಕಂಡು ಬರುತ್ತಿರುವುದರ ಬಗ್ಗೆ ಇನ್ನಷ್ಟು ದತ್ತಾಂಶ ಕೈಸೇರುವವರೆಗೆ ಕಾದು ನೋಡುವುದಾಗಿ ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದಾರೆ.</p>.<p>ಪಟೇಲ್ ನೇತೃತ್ವದ ಆರು ಮಂದಿ ಸದಸ್ಯರ ಹಣಕಾಸು ನೀತಿ ಸಮಿತಿಯು (ಎಂಪಿಸಿ), ಏಪ್ರಿಲ್ ತಿಂಗಳ ದ್ವೈಮಾಸಿಕ ಪರಾಮರ್ಶೆಯಲ್ಲಿ ಸತತ ಮೂರನೇ ಬಾರಿಯೂ ಬಡ್ಡಿ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ರಿಸರ್ವ್ ಬ್ಯಾಂಕ್, ಮುಂಬರುವ ದಿನಗಳಲ್ಲಿ ತನ್ನ ಅಲ್ಪಾವಧಿ ಬಡ್ಡಿ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇಲ್ಲ ಎಂದು ಹಣಕಾಸು ಸಚಿವಾಲಯ ನಿರೀಕ್ಷಿಸಿದೆ.</p>.<p>‘ಜೂನ್ ದ್ವೈಮಾಸಿಕ ಹಣಕಾಸು ಪರಾಮರ್ಶೆಯಲ್ಲಿ ಆರ್ಬಿಐ ಬಡ್ಡಿ ದರ ಹೆಚ್ಚಳವನ್ನು ಪರಿಗಣಿಸಲಿದೆ’ ಎಂದು ಡೆಪ್ಯುಟಿ ಗವರ್ನರ್ ವಿರಲ್ ಆಚಾರ್ಯ ಅವರು ಇಂಗಿತ ವ್ಯಕ್ತಪಡಿಸಿದ್ದರೂ, ಅಂತಹ ಪರಿಸ್ಥಿತಿ ಎದುರಾಗುವುದಿಲ್ಲ ಎಂದು ಸಚಿವಾಲಯ ಅಂದಾಜಿಸಿದೆ.</p>.<p>‘ಬಡ್ಡಿ ದರಗಳು ಈಗಾಗಲೇ ಗರಿಷ್ಠ ಮಟ್ಟದಲ್ಲಿ ಇವೆ. ಅವುಗಳು ಇನ್ನಷ್ಟು ಏರಿಕೆ ಆಗಲಿವೆಯೆಂದು ನನಗೆ ಅನಿಸುವುದಿಲ್ಲ’ ಎಂದು ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಏಪ್ರಿಲ್ ತಿಂಗಳಲ್ಲಿ ನಡೆದ ಹಣಕಾಸು ನೀತಿ ಸಮಿತಿಯ ಸಭೆಯ ನಡಾವಳಿಯ ಪ್ರಕಾರ, ಕಡಿಮೆ ಬಡ್ಡಿ ದರದ ಸುಲಭ ಹಣಕಾಸು ನೀತಿ ಕೈಬಿಡಬೇಕು ಎಂದು ಆರ್ಬಿಐ ಡೆಪ್ಯುಟಿ ಗವರ್ನರ್ ವಿರಲ್ ಆಚಾರ್ಯ ಅವರು ತಮ್ಮ ಅನಿಸಿಕೆ ದಾಖಲಿದ್ದಾರೆ. ಈ ನಿರ್ಧಾರಕ್ಕೆ ಬರುವ ಮೊದಲು ಕೇಂದ್ರೀಯ ಬ್ಯಾಂಕ್ ಇನ್ನಷ್ಟು ಸಮಯ ಕಾದು ನೋಡಬೇಕು ಎಂದು ಅವರು ಹೇಳಿದ್ದಾರೆ.</p>.<p>ಸಾಲ ಪಡೆಯುವ ಪ್ರಮಾಣದಲ್ಲಿ ನಿರಂತರವಾಗಿ ಪ್ರಗತಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಚೇತರಿಕೆ ಕಂಡು ಬರುತ್ತಿರುವುದರ ಬಗ್ಗೆ ಇನ್ನಷ್ಟು ದತ್ತಾಂಶ ಕೈಸೇರುವವರೆಗೆ ಕಾದು ನೋಡುವುದಾಗಿ ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದಾರೆ.</p>.<p>ಪಟೇಲ್ ನೇತೃತ್ವದ ಆರು ಮಂದಿ ಸದಸ್ಯರ ಹಣಕಾಸು ನೀತಿ ಸಮಿತಿಯು (ಎಂಪಿಸಿ), ಏಪ್ರಿಲ್ ತಿಂಗಳ ದ್ವೈಮಾಸಿಕ ಪರಾಮರ್ಶೆಯಲ್ಲಿ ಸತತ ಮೂರನೇ ಬಾರಿಯೂ ಬಡ್ಡಿ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>