ಮುಳಬಾಗಿಲು: ‘ನ್ಯಾಯಾಲಯಕ್ಕೆ ಬರುವ ಕಕ್ಷಿದಾರರು, ವಕೀಲರು, ಸಿಬ್ಬಂದಿಗೆ ಅನುಕೂಲವಾಗುವ ದೃಷ್ಟಿಯಿಂದ ನ್ಯಾಯಾಲಯದ ಎದುರು ರಾಜ್ಯ ರಸ್ತೆ ಸಾರಿಗೆ ಬಸ್ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ನುಡಿದರು.
ನಗರದ ನ್ಯಾಯಾಲಯದ ಮುಂದೆ ರಾಜ್ಯ ರಸ್ತೆ ಸಾರಿಗೆ ಬಸ್ಗಳ ನಿಲುಗಡೆಗೆ ಚಾಲನೆ ನೀಡಿ ಮಾತನಾಡಿದರು.
ಡಿಪೊ ವ್ಯವಸ್ಥಾಪಕ ಅನ್ಸರ್ ಮಾತನಾಡಿ, ಸಾಮಾನ್ಯ ಬಸ್ಗಳಿಗೆ ₹ 5 ಹಾಗೂ ಎಕ್ಸ್ಪ್ರೆಸ್ ಬಸ್ಗಳಿಗೆ ₹ 10 ದರ ನಿಗದಿಪಡಿಸಲಾಗಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಯಾದವಾಡ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕಾಂತಮ್ಮ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಎಸ್. ಶ್ರೀನಿವಾಸ್ ರೆಡ್ಡಿ, ಪಿ.ಎಂ. ಸದಾಶಿವಯ್ಯ ಇದ್ದರು.