<p><strong>ಕೋಲಾರ: </strong>ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್ ಸಾರ್ವಜನಿಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯ ಶ್ರೀನಿವಾಸಪುರ, ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲ್ಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ನೀರು ಮತ್ತು ಚರಂಡಿ ಸಮಸ್ಯೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ಅಂಗನವಾಡಿ ಕಟ್ಟಡಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಬಂಧ ಗ್ರಾಮಸ್ಥರೊಂದಿಗೆ ಚರ್ಚಿಸಿದ್ದೇವೆ. ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಬೇಸಿಗೆ ಕಾರಣಕ್ಕೆ ಜಿಲ್ಲೆಯಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಯಾವುದೇ ಸಮಸ್ಯೆ ಆಗಬಾರದೆಂಬ ಉದ್ದೇಶಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಮೊದಲ ಹಂತದಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇರೆಗೆ ಪಡೆದು ನೀರು ಪೂರೈಕೆ ಮಾಡಲು ಪ್ರಯತ್ನಿಸುತ್ತೇವೆ. ಕೊಳವೆ ಬಾವಿ ಲಭ್ಯವಾಗದಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು’ ಎಂದು ಹೇಳಿದರು.</p>.<p><strong>ದೂರು ಬಂದಿವೆ</strong></p>.<p>‘ನೀರಿನ ಜತೆಗೆ ಗ್ರಾಮಗಳಲ್ಲಿನ ಮೂಲಸೌಕರ್ಯ ಸಮಸ್ಯೆ ಬಗ್ಗೆಯೂ ಜನರಿಂದ ದೂರು ಬಂದಿವೆ. ಪಿಂಚಣಿ, ವೃದ್ಧಾಪ್ಯ ವೇತನ ಪಾವತಿ ಆಗದಿರುವ ಸಂಗತಿಯನ್ನು ಜನ ಗಮನಕ್ಕೆ ತಂದಿದ್ದು, ಈ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಈಗಾಗಲೇ ನಿರ್ಮಿಸಿರುವ ಚೆಕ್ಡ್ಯಾಂಗಳಲ್ಲಿ ಮಳೆ ನೀರು ತುಂಬಿಕೊಂಡಿದೆ. ನರೇಗಾ ಅಡಿ ಕೆರೆಗಳಲ್ಲಿ ಹೂಳು ತೆಗೆದಿರುವ ಹೊಂಡಗಳಿಗೆ ನೀರು ಬಂದಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮೇವಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿದಿದೆ’ ಎಂದು ಮಾಹಿತಿ ನೀಡಿದರು.</p>.<p><strong>ಪ್ರತಿಯೊಬ್ಬರ ಜವಾಬ್ದಾರಿ</strong></p>.<p>‘ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸುವ ಮನೋಭಾವ ಜನರಲ್ಲಿ ಮೂಡಬೇಕು. ಯಾವುದೇ ಸಮಸ್ಯೆ ಎದುರಾದರೂ ಎದುರಿಸಬಹುದು. ಆದರೆ, ನೀರಿನ ಸಮಸ್ಯೆ ತೀವ್ರಗೊಂಡರೆ ಜನ ತೊಂದರೆ ಅನುಭವಿಸಬೇಕಾಗುತ್ತದೆ. ನೀರು ಮತ್ತು ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಜಿ.ಪಂ ಸಿಇಒ ಜಗದೀಶ್ ಕಿವಿಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್ ಸಾರ್ವಜನಿಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯ ಶ್ರೀನಿವಾಸಪುರ, ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲ್ಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ನೀರು ಮತ್ತು ಚರಂಡಿ ಸಮಸ್ಯೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ಅಂಗನವಾಡಿ ಕಟ್ಟಡಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಬಂಧ ಗ್ರಾಮಸ್ಥರೊಂದಿಗೆ ಚರ್ಚಿಸಿದ್ದೇವೆ. ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಬೇಸಿಗೆ ಕಾರಣಕ್ಕೆ ಜಿಲ್ಲೆಯಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಯಾವುದೇ ಸಮಸ್ಯೆ ಆಗಬಾರದೆಂಬ ಉದ್ದೇಶಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಮೊದಲ ಹಂತದಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇರೆಗೆ ಪಡೆದು ನೀರು ಪೂರೈಕೆ ಮಾಡಲು ಪ್ರಯತ್ನಿಸುತ್ತೇವೆ. ಕೊಳವೆ ಬಾವಿ ಲಭ್ಯವಾಗದಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು’ ಎಂದು ಹೇಳಿದರು.</p>.<p><strong>ದೂರು ಬಂದಿವೆ</strong></p>.<p>‘ನೀರಿನ ಜತೆಗೆ ಗ್ರಾಮಗಳಲ್ಲಿನ ಮೂಲಸೌಕರ್ಯ ಸಮಸ್ಯೆ ಬಗ್ಗೆಯೂ ಜನರಿಂದ ದೂರು ಬಂದಿವೆ. ಪಿಂಚಣಿ, ವೃದ್ಧಾಪ್ಯ ವೇತನ ಪಾವತಿ ಆಗದಿರುವ ಸಂಗತಿಯನ್ನು ಜನ ಗಮನಕ್ಕೆ ತಂದಿದ್ದು, ಈ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಈಗಾಗಲೇ ನಿರ್ಮಿಸಿರುವ ಚೆಕ್ಡ್ಯಾಂಗಳಲ್ಲಿ ಮಳೆ ನೀರು ತುಂಬಿಕೊಂಡಿದೆ. ನರೇಗಾ ಅಡಿ ಕೆರೆಗಳಲ್ಲಿ ಹೂಳು ತೆಗೆದಿರುವ ಹೊಂಡಗಳಿಗೆ ನೀರು ಬಂದಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮೇವಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿದಿದೆ’ ಎಂದು ಮಾಹಿತಿ ನೀಡಿದರು.</p>.<p><strong>ಪ್ರತಿಯೊಬ್ಬರ ಜವಾಬ್ದಾರಿ</strong></p>.<p>‘ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸುವ ಮನೋಭಾವ ಜನರಲ್ಲಿ ಮೂಡಬೇಕು. ಯಾವುದೇ ಸಮಸ್ಯೆ ಎದುರಾದರೂ ಎದುರಿಸಬಹುದು. ಆದರೆ, ನೀರಿನ ಸಮಸ್ಯೆ ತೀವ್ರಗೊಂಡರೆ ಜನ ತೊಂದರೆ ಅನುಭವಿಸಬೇಕಾಗುತ್ತದೆ. ನೀರು ಮತ್ತು ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಜಿ.ಪಂ ಸಿಇಒ ಜಗದೀಶ್ ಕಿವಿಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>