ನರೇಗಾ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ರಸ್ತೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ
– ಆನಂದ್, ಪಿಡಿಒ ದೋಣಿಮಡಗು ಗ್ರಾಮ ಪಂಚಾಯಿತಿ
ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
– ಅಪ್ಪೋಜಿ ರಾವ್, ತಾಲ್ಲೂಕು ಅಧ್ಯಕ್ಷ ರೈತ ಸಂಘ
ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ಅಕ್ರಮಗಳನ್ನು ಪರೀಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು
– ಹುಣಸನಹಳ್ಳಿ ಎನ್. ವೆಂಕಟೇಶ್, ರಾಜ್ಯಾಧ್ಯಕ್ಷ ದಲಿತ ರೈತ ಸೇನೆ
ಕ್ರಿಯಾ ಯೋಜನೆಯಂತೆ ರಸ್ತೆ ನಿರ್ಮಾಣ ಮಾಡಿ ಎರಡೂ ಬದಿಯಲ್ಲಿ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ ಮಾಡಬೇಕು.
– ಬಸಪ್ಪ, ರೈತ ಸಾಕರಸನಹಳ್ಳಿ
ಕಾಯಕ ಮಿತ್ರ ಇದ್ದರೂ ಯಾವುದೇ ಪ್ರಯೋಜನವಿಲ್ಲ. ಕಾಯಕ ಮಿತ್ರ ಎದುರಿಗೆ ಜನರನ್ನು ಬೆಳಗ್ಗೆ ಮತ್ತು ಮಧ್ಯಾಹ್ನ ಪೋಟೋಗಾಗಿ ಪ್ರತಿ ದಿನ ₹100 ಕೊಟ್ಟು ಫೋಟೋ ತೆಗೆಸಿದ ನಂತರ ಯಂತ್ರಗಳ ಮೂಲಕ ಕಾಮಗಾರಿ ಮಾಡಿ ಕಾರ್ಮಿಕರನ್ನು ವಂಚಿಸಲಾಗಿದೆ.