<p><strong>ಮುಳಬಾಗಿಲು (ಕೋಲಾರ):</strong> ತಾಲ್ಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಂಜೇನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರು ಕಲುಷಿತ ನೀರು ಕುಡಿದು ಮೃತಪಟ್ಟಿರುವುದು ಗೊತ್ತಾಗಿದೆ.</p> <p>ವೆಂಕಟರಮಣಪ್ಪ (50) ಮೃತ ವ್ಯಕ್ತಿ. ಪ್ರಕರಣದಲ್ಲಿ ಐದಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಎಸ್ ಎನ್ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p> <p>ಗ್ರಾಮ ಪಂಚಾಯಿತಿ ಟ್ಯಾಂಕ್ ನಿಂದ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು, ನೀರು ಕಲುಷಿತಗೊಂಡಿತ್ತು ಎನ್ನಲಾಗಿದೆ.</p> <p>'ವೆಂಕಟರಮಣಪ್ಪ ಎಂಬುವರು ಮೃತಪಟ್ಟಿದ್ದು, ಕೆಲವರು ಅಸ್ವಸ್ಥಗೊಂಡಿರುವುದು ನಿಜ. ಆದರೆ, ನೀರಿನ ಸಮಸ್ಯೆಯಿಂದ ಅಲ್ಲ. ನೀರನ್ನು ಪರೀಕ್ಷೆ ಮಾಡಿದ್ದು, ಕಲುಷಿತವಾಗಿಲ್ಲ. ಟಿಎಚ್ಒ ಭೇಟಿ ನೀಡಿ ಪರಿಶೀಲಿಸಿದರು' ಎಂದು ಪಂಚಾಯಿತಿ ಪಿಡಿಒ ಪದ್ಮಾ 'ಪ್ರಜಾವಾಣಿ'ಗೆ ತಿಳಿಸಿದರು.</p>.ಮಧುಗಿರಿ | ಕಲುಷಿತ ನೀರು ಸೇವಿಸಿ ಅಸ್ವಸ್ಥ: ಸಾವಿನ ಸಂಖ್ಯೆ 7ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು (ಕೋಲಾರ):</strong> ತಾಲ್ಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಂಜೇನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರು ಕಲುಷಿತ ನೀರು ಕುಡಿದು ಮೃತಪಟ್ಟಿರುವುದು ಗೊತ್ತಾಗಿದೆ.</p> <p>ವೆಂಕಟರಮಣಪ್ಪ (50) ಮೃತ ವ್ಯಕ್ತಿ. ಪ್ರಕರಣದಲ್ಲಿ ಐದಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಎಸ್ ಎನ್ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p> <p>ಗ್ರಾಮ ಪಂಚಾಯಿತಿ ಟ್ಯಾಂಕ್ ನಿಂದ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು, ನೀರು ಕಲುಷಿತಗೊಂಡಿತ್ತು ಎನ್ನಲಾಗಿದೆ.</p> <p>'ವೆಂಕಟರಮಣಪ್ಪ ಎಂಬುವರು ಮೃತಪಟ್ಟಿದ್ದು, ಕೆಲವರು ಅಸ್ವಸ್ಥಗೊಂಡಿರುವುದು ನಿಜ. ಆದರೆ, ನೀರಿನ ಸಮಸ್ಯೆಯಿಂದ ಅಲ್ಲ. ನೀರನ್ನು ಪರೀಕ್ಷೆ ಮಾಡಿದ್ದು, ಕಲುಷಿತವಾಗಿಲ್ಲ. ಟಿಎಚ್ಒ ಭೇಟಿ ನೀಡಿ ಪರಿಶೀಲಿಸಿದರು' ಎಂದು ಪಂಚಾಯಿತಿ ಪಿಡಿಒ ಪದ್ಮಾ 'ಪ್ರಜಾವಾಣಿ'ಗೆ ತಿಳಿಸಿದರು.</p>.ಮಧುಗಿರಿ | ಕಲುಷಿತ ನೀರು ಸೇವಿಸಿ ಅಸ್ವಸ್ಥ: ಸಾವಿನ ಸಂಖ್ಯೆ 7ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>