‘ಬಿಜೆಪಿ ಮುಖಂಡರು ಸಮ್ಮಿಶ್ರ ಸರ್ಕಾರ ಕೆಡವಲು ನಿನ್ನೆ ಮೊನ್ನೆಯಿಂದ ಕುದುರೆ ವ್ಯಾಪಾರಕ್ಕೆ ಮುಂದಾಗಿಲ್ಲ. ಸರ್ಕಾರ ರಚನೆಯಾದ ದಿನದಿಂದಲೂ ನಿರಂತರವಾಗಿ ಆ ಪ್ರಯತ್ನ ಮಾಡುತ್ತಿದ್ದಾರೆ. ನನ್ನನ್ನು ಅವರ ಪಕ್ಷಕ್ಕೆ ಸೆಳೆದುಕೊಳ್ಳಲು ₹ 5 ಕೋಟಿ ಕೊಟ್ಟಿದ್ದರು. ಆದರೆ, ನಾನು ಅದಕ್ಕೆ ಒಪ್ಪದೆ ಹಣ ವಾಪಸ್ ಕಳುಹಿಸಿದ್ದೆ. ಅಲ್ಲದೇ, ಈ ಸಂಗತಿಯನ್ನು ಪಕ್ಷದ ವರಿಷ್ಠರ ಗಮನಕ್ಕೂ ತಂದಿದ್ದೆ’ ಎಂದು ತಿಳಿಸಿದರು.