ಆರ್ಥಿಕ ಅಸಮಾನತೆ: ‘ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಉನ್ನತ ಸಮಿತಿ ಮೂಲಕ ಕೈಗಾರಿಕೋದ್ಯಮಿಗಳು ಕೇಳಿದ ಜಾಗದಲ್ಲಿ ಜಮೀನು ಖರೀದಿಸಲು ಅನುಮತಿ ನೀಡಬಹುದು. ಸರ್ಕಾರದ ನಡೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಆದರೆ, ಪ್ರಬಲ ಹೋರಾಟ ಮಾಡುತ್ತಿಲ್ಲ. ಕಾಯ್ದೆ ತಿದ್ದುಪಡಿಯಿಂದ ಉಳ್ಳವರು ಆರ್ಥಿಕವಾಗಿ ಮತ್ತಷ್ಟು ಪ್ರಬಲರಾಗುತ್ತಾರೆ. ಬಡವರು ಶೋಷಣೆಗೆ ಬಲಿಯಾಗುತ್ತಾರೆ. ಇದರಿಂದ ಆರ್ಥಿಕ ಅಸಮಾನತೆ ಹೆಚ್ಚಿಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.