ಮಾರುಕಟ್ಟೆಯಲ್ಲಿ ವರ್ತಕರು 80–90 ವರ್ಷಗಳಿಂದ ಅಂಗಡಿಗಳನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿರುವ 1,779 ಅಂಗಡಿಗಳನ್ನು ಎರಡು ಮೂರು ಪೀಳಿಗೆಗಳಿಂದ ನಡೆಸಿಕೊಂಡು ಬರುತ್ತಿದ್ದೇವೆ. ಈಗ ಅಂಗಡಿಗಳನ್ನು ಹನ್ನೆರಡು ವರ್ಷದ ಅವಧಿಗೆ ಬಾಡಿಗೆ ನೀಡಲು ಇ ಹರಾಜಿನ ಮೂಲಕ ನಗರಸಭೆ ತೀರ್ಮಾನಿಸಿದೆ. ಇದರಿಂದಾಗಿ ಅಂಗಡಿ ಮಾಲೀಕರು ಅಂಗಡಿ ಕಳೆದುಕೊಂಡು ನಿರುದ್ಯೋಗಿಗಳಾಗುವ ಸಂಭವ ಹೆಚ್ಚಾಗಿದೆ. ಆದ್ದರಿಂದ ನೆಲ ಬಾಡಿಗೆ ಆಧಾರದ ಮೇರೆಗೆ ಕಟ್ಟಡಗಳನ್ನು ಮಂಜೂರು ಮಾಡಬೇಕು. ಈ ಸಂಬಂಧವಾಗಿ ನಗರಸಭೆಯಲ್ಲಿ ತೀರ್ಮಾನ ತೆಗೆದುಕೊಂಡು ಜಿಲ್ಲಾಧಿಕಾರಿಗಳಿಗೆ ಕಳಿಸಬೇಕು ಎಂದು ವರ್ತಕರ ಸಂಘದ ಪದಾಧಿಕಾರಿಗಳು ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ ಅವರನ್ನು
ಒತ್ತಾಯಿಸಿದ್ದಾರೆ.