ಮುಳಬಾಗಿಲು (ಕೋಲಾರ ಜಿಲ್ಲೆ): ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಕಚೇರಿ ಆವರಣದಲ್ಲಿ ಆದಿಕವಿ ಪಂಪನ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಷಿ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ಹಂಚಿಕೊಂಡ ಅವರು, ‘ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಉಪ್ಪುಕುಂಟೆಯಲ್ಲಿರುವ ಶ್ರೀಕಾಳಿಕಾದೇವಿ ಶಿಲ್ಪಕಲಾ ಮಂದಿರದಲ್ಲಿ ₹5 ಲಕ್ಷ ವೆಚ್ಚದಲ್ಲಿ ಪಂಚಲೋಹದ ಪ್ರತಿಮೆ ಸಿದ್ಧವಾಗುತ್ತಿದೆ’ ಎಂದು ತಿಳಿಸಿದರು.
ಪ್ರತಿಮೆ ನಿರ್ಮಾಣ ಶೇ 80ರಷ್ಟು ಪೂರ್ಣಗೊಂಡಿದ್ದು, ಎರಡು ತಿಂಗಳಲ್ಲಿ ನಿರ್ಮಾಣ ಕಾರ್ಯ ಮುಗಿಯಲಿದೆ. ಎರಡು ಅಡಿ ಅಗಲ, ಮೂರು ಅಡಿ ಎತ್ತರದ ಮೂರ್ತಿ 90ರಿಂದ ನೂರು ಕೆ.ಜೆ ತೂಕವಿರಲಿದೆ. ಕಲಾವಿದ ಎಸ್. ಮಂಜುನಾಥ ಪ್ರತಿಮೆ ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.