<p><strong>ಕೋಲಾರ:</strong> ಪಾಲಾರ್ ನದಿ ಮೂಲದ ದೊಡ್ಡಕೆರೆಯಾದ ಸೋಮಾಂಬುಧಿ ಅಗ್ರಹಾರ ಕೆರೆಯನ್ನು ಪ್ರವಾಸಿ ತಾಣವಾಗಿಸಿ, ಕೋಡಿ ಪಕ್ಕದಲ್ಲಿ ಸುಂದರ ಉದ್ಯಾನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಎಸ್. ಮುನಿಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಸೋಮಂಬುಧಿ ಅಗ್ರಹಾರ ಕೆರೆಗೆ ಭಾನುವಾರ ಭಾಗಿನ ಅರ್ಪಿಸಿದ ನಂತರ ಮಾತನಾಡಿದರು.</p>.<p>ನೀರು ಸಂಗ್ರಹದಲ್ಲಿ ಜಿಲ್ಲೆಯ ದೊಡ್ಡ ಕೆರೆ ಹಾಗೂ ಸುಂದರ ಕೋಡಿ ಹೊಂದಿರುವ ಈ ಕೆರೆ ವೀಕ್ಷಣೆಗೆ ವಿವಿಧೆಡೆಯಿಂದ ಜನರು ಬರುತ್ತಿದ್ದಾರೆ. ಅರಣ್ಯ, ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಇಲ್ಲಿ ಉದ್ಯಾನ ನಿರ್ಮಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಜಿಂಕೆ ಹಾಗೂ ನವಿಲು ಹೇರಳವಾಗಿವೆ. ಕೆರೆ ಪಕ್ಕದಲ್ಲೆ ಅರಣ್ಯವೂ ಇರುವುದರಿಂದ ಇಲ್ಲಿ ತಂದು ಬಿಟ್ಟು, ಪ್ರವಾಸಿ ತಾಣವಾಗಿಸುವುದಾಗಿ ತಿಳಿಸಿದರು.</p>.<p>ಮೀನುಗಾರಿಕೆಗೆ ಹೇರಳ ಅವಕಾಶಗಳಿವೆ. ಮೀನುಗಾರಿಕೆ ಇಲಾಖೆಗೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ. ಕೆರೆಗಳ ಪುನಶ್ಚೇತನಕ್ಕೆ ಸರ್ಕಾರದ ಜತೆ ರೈತರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.</p>.<p>ಶಾಸಕರಾದ ರಮೇಶ್ಕುಮಾರ್, ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗನಾಳ ಸೋಮಣ್ಣ, ಎಸ್ಎಫ್ಸಿಎಸ್ ಅಧ್ಯಕ್ಷ ತಿಮ್ಮರಾಯಪ್ಪ, ಬ್ಯಾಟಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಪಾಲಾರ್ ನದಿ ಮೂಲದ ದೊಡ್ಡಕೆರೆಯಾದ ಸೋಮಾಂಬುಧಿ ಅಗ್ರಹಾರ ಕೆರೆಯನ್ನು ಪ್ರವಾಸಿ ತಾಣವಾಗಿಸಿ, ಕೋಡಿ ಪಕ್ಕದಲ್ಲಿ ಸುಂದರ ಉದ್ಯಾನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಎಸ್. ಮುನಿಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಸೋಮಂಬುಧಿ ಅಗ್ರಹಾರ ಕೆರೆಗೆ ಭಾನುವಾರ ಭಾಗಿನ ಅರ್ಪಿಸಿದ ನಂತರ ಮಾತನಾಡಿದರು.</p>.<p>ನೀರು ಸಂಗ್ರಹದಲ್ಲಿ ಜಿಲ್ಲೆಯ ದೊಡ್ಡ ಕೆರೆ ಹಾಗೂ ಸುಂದರ ಕೋಡಿ ಹೊಂದಿರುವ ಈ ಕೆರೆ ವೀಕ್ಷಣೆಗೆ ವಿವಿಧೆಡೆಯಿಂದ ಜನರು ಬರುತ್ತಿದ್ದಾರೆ. ಅರಣ್ಯ, ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಇಲ್ಲಿ ಉದ್ಯಾನ ನಿರ್ಮಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಜಿಂಕೆ ಹಾಗೂ ನವಿಲು ಹೇರಳವಾಗಿವೆ. ಕೆರೆ ಪಕ್ಕದಲ್ಲೆ ಅರಣ್ಯವೂ ಇರುವುದರಿಂದ ಇಲ್ಲಿ ತಂದು ಬಿಟ್ಟು, ಪ್ರವಾಸಿ ತಾಣವಾಗಿಸುವುದಾಗಿ ತಿಳಿಸಿದರು.</p>.<p>ಮೀನುಗಾರಿಕೆಗೆ ಹೇರಳ ಅವಕಾಶಗಳಿವೆ. ಮೀನುಗಾರಿಕೆ ಇಲಾಖೆಗೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ. ಕೆರೆಗಳ ಪುನಶ್ಚೇತನಕ್ಕೆ ಸರ್ಕಾರದ ಜತೆ ರೈತರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.</p>.<p>ಶಾಸಕರಾದ ರಮೇಶ್ಕುಮಾರ್, ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗನಾಳ ಸೋಮಣ್ಣ, ಎಸ್ಎಫ್ಸಿಎಸ್ ಅಧ್ಯಕ್ಷ ತಿಮ್ಮರಾಯಪ್ಪ, ಬ್ಯಾಟಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>