<p>ಕೋಲಾರ: ‘ಪಶುಭಾಗ್ಯ ಯೋಜನೆಯಲ್ಲಿ ಸೌಲಭ್ಯ ಸಮರ್ಪಕವಾಗಿ ವಿತರಣೆಯಾಗದ ಕಾರಣ ತಾತ್ಕಾಲಿಕವಾಗಿ ಯೋಜನೆ ಸ್ಥಗಿತಗೊಳಿಸಲಾಗಿದೆ. ಮುಂದೆ ಎಸ್ಸಿಪಿ ಮತ್ತು ಟಿಎಸ್ಪಿ ಮೂಲಕ ಸೌಲಭ್ಯ ಕಲ್ಪಿಸುತ್ತೇವೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಭರವಸೆ ನೀಡಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಸಾಕಷ್ಟಿದೆ. ಖಾಲಿ ಹುದ್ದೆ ಭರ್ತಿ ಮಾಡುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಕೊಂಚ ತಡವಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಪಶು ಆಹಾರ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಈ ಅಕ್ರಮಕ್ಕೆ ಕಡಿವಾಣ ಹಾಕುತ್ತೇವೆ. ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುತ್ತೇವೆ. ಪಶು ಇಲಾಖೆ ಆಂಬುಲೆನ್ಸ್ಗಳನ್ನು ಉಪಕರಣ ಸಮೇತ ಪ್ರಾಯೋಗಿಕವಾಗಿ 15 ಜಿಲ್ಲೆಗಳಿಗೆ ನೀಡಲಾಗುತ್ತಿದ್ದು, ಸಿಬ್ಬಂದಿಗೆ ಹಳ್ಳಿಗಳಿಗೆ ತೆರಳಿ ರಾಸುಗಳಿಗೆ ಚಿಕಿತ್ಸೆ ನೀಡುತ್ತಾರೆ’ ಎಂದು ವಿವರಿಸಿದರು.</p>.<p>‘ಈಗಾಗಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಆರಂಭಿಸಲಾಗಿದ್ದು, ಪಶು ಮೇಳ ಮಾಡಿದ್ದೇವೆ. ಹಸುಗಳು ಯಾವುದೇ ಕಾರಣಕ್ಕೂ ಕಸಾಯಿ ಖಾನೆಗೆ ಹೋಗಬಾರದು. ಗೋಮಾತೆ ರಕ್ಷಣೆಯಾಗಬೇಕು. ವೈದ್ಯರು ಪ್ರತಿ ಗ್ರಾಮಕ್ಕೆ ತೆರಳಿ ರೈತರ ಸಮಸ್ಯೆಗೆ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ವಿಪಕ್ಷದವರಿಗೆ ಕೆಲಸವಿಲ್ಲ: ‘ಕೋವಿಡ್–19ಗೆ ಸಂಬಂಧಿಸಿದ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ವಿರೋಧ ಪಕ್ಷದವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಆರೋಪ ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ವಿಚಾರವಾಗಿ ಪಕ್ಷದಲ್ಲಿ ಗೊಂದಲವಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್ಡೌನ್ ಮಾಡುವುದಿಲ್ಲ’ ಎಂದು ಹೇಳಿದರು.</p>.<p>‘ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಜನರಿಗೆ ಸೋಂಕಿನ ಗಂಭೀರತೆಯ ಅರಿವಿಲ್ಲ. ಜನ ಸಹಕಾರ ನೀಡಿದರೆ ಕೊರೊನಾ ಸೋಂಕಿನ ನಿಯಂತ್ರಣ ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ‘ಪಶುಭಾಗ್ಯ ಯೋಜನೆಯಲ್ಲಿ ಸೌಲಭ್ಯ ಸಮರ್ಪಕವಾಗಿ ವಿತರಣೆಯಾಗದ ಕಾರಣ ತಾತ್ಕಾಲಿಕವಾಗಿ ಯೋಜನೆ ಸ್ಥಗಿತಗೊಳಿಸಲಾಗಿದೆ. ಮುಂದೆ ಎಸ್ಸಿಪಿ ಮತ್ತು ಟಿಎಸ್ಪಿ ಮೂಲಕ ಸೌಲಭ್ಯ ಕಲ್ಪಿಸುತ್ತೇವೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಭರವಸೆ ನೀಡಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಸಾಕಷ್ಟಿದೆ. ಖಾಲಿ ಹುದ್ದೆ ಭರ್ತಿ ಮಾಡುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಕೊಂಚ ತಡವಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಪಶು ಆಹಾರ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಈ ಅಕ್ರಮಕ್ಕೆ ಕಡಿವಾಣ ಹಾಕುತ್ತೇವೆ. ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುತ್ತೇವೆ. ಪಶು ಇಲಾಖೆ ಆಂಬುಲೆನ್ಸ್ಗಳನ್ನು ಉಪಕರಣ ಸಮೇತ ಪ್ರಾಯೋಗಿಕವಾಗಿ 15 ಜಿಲ್ಲೆಗಳಿಗೆ ನೀಡಲಾಗುತ್ತಿದ್ದು, ಸಿಬ್ಬಂದಿಗೆ ಹಳ್ಳಿಗಳಿಗೆ ತೆರಳಿ ರಾಸುಗಳಿಗೆ ಚಿಕಿತ್ಸೆ ನೀಡುತ್ತಾರೆ’ ಎಂದು ವಿವರಿಸಿದರು.</p>.<p>‘ಈಗಾಗಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಆರಂಭಿಸಲಾಗಿದ್ದು, ಪಶು ಮೇಳ ಮಾಡಿದ್ದೇವೆ. ಹಸುಗಳು ಯಾವುದೇ ಕಾರಣಕ್ಕೂ ಕಸಾಯಿ ಖಾನೆಗೆ ಹೋಗಬಾರದು. ಗೋಮಾತೆ ರಕ್ಷಣೆಯಾಗಬೇಕು. ವೈದ್ಯರು ಪ್ರತಿ ಗ್ರಾಮಕ್ಕೆ ತೆರಳಿ ರೈತರ ಸಮಸ್ಯೆಗೆ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ವಿಪಕ್ಷದವರಿಗೆ ಕೆಲಸವಿಲ್ಲ: ‘ಕೋವಿಡ್–19ಗೆ ಸಂಬಂಧಿಸಿದ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ವಿರೋಧ ಪಕ್ಷದವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಆರೋಪ ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ವಿಚಾರವಾಗಿ ಪಕ್ಷದಲ್ಲಿ ಗೊಂದಲವಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್ಡೌನ್ ಮಾಡುವುದಿಲ್ಲ’ ಎಂದು ಹೇಳಿದರು.</p>.<p>‘ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಜನರಿಗೆ ಸೋಂಕಿನ ಗಂಭೀರತೆಯ ಅರಿವಿಲ್ಲ. ಜನ ಸಹಕಾರ ನೀಡಿದರೆ ಕೊರೊನಾ ಸೋಂಕಿನ ನಿಯಂತ್ರಣ ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>