ಮುಷ್ಕರದ ನಡುವೆ ಬಂಗಾರಪೇಟೆ ತಾಲ್ಲೂಕಿನಲ್ಲಿ ಕಿಡಿಗೇಡಿಗಳು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, 4 ಬಸ್ಗಳ ಗಾಜು ಪುಡಿಪುಡಿಯಾಗಿವೆ. ಬಂಗಾರಪೇಟೆ ನಿಲ್ದಾಣದಲ್ಲಿ 3 ಬಸ್ಗಳ ಮೇಲೆ ಬೆಳಗಿನ ಜಾವ ಕಲ್ಲು ತೂರಲಾಗಿದೆ. ಕೆಜಿಎಫ್ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ನ ಮೇಲೆ ಬಂಗಾರಪೇಟೆ ತಾಲ್ಲೂಕಿನ ಬೆಂಗನೂರು ಸಮೀಪ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.