ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ’

Last Updated 30 ಅಕ್ಟೋಬರ್ 2020, 11:02 IST
ಅಕ್ಷರ ಗಾತ್ರ

ಗೌರಿಬಿದನೂರು: ‘ಭ್ರಷ್ಟಾಚಾರದ ನಿರ್ಮೂಲನೆಗಾಗಿ ತಾಲ್ಲೂಕಿನ ಎಲ್ಲ ಅಧಿಕಾರಿಗಳು ಮುಂದಾಗಬೇಕು’ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಆರ್. ಪವಿತ್ರಾ ಮನವಿ ಮಾಡಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದನಗರದ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ್ದ ‘ಭ್ರಷ್ಟಾಚಾರ ನಿರ್ಮೂಲನೆ’ ಕೇಂದ್ರದ ವಿಚಕ್ಷಣದಳ ವತಿಯಿಂದ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಸಹಾಯಕ ಅಭಿಯೋಜಕ ಆದಿನಾರಾಯಣಪ್ಪ, ಭ್ರಷ್ಟಾಚಾರ ಈ ದೇಶದ ದೊಡ್ಡ ಪಿಡುಗು ಎಂದರು.

ವಕೀಲ ಸಂಘದ ಆಧ್ಯಕ್ಷ ವಿ.ಸಿ.ಗಂಗಯ್ಯ ಮಾತನಾಡಿ, ಎಲ್ಲ ಕಚೇರಿಗಳಲ್ಲಿ ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ಹಾಕಬೇಕು ಎಂದರು.

ಉಪ ತಹಶೀಲ್ದಾರ್ ಆಶಾ, ವಕೀಲರ ಸಂಘದ ಉಪಾಧ್ಯಕ್ಷ ಎನ್.ಆರ್. ಧನಂಜಯ್, ವಕೀಲರಾದ ವಿ.ಗೋಪಾಲ್, ನಾಗರಾಜು, ಕೆ.ಲಕ್ಷ್ಮಿನಾರಾಯಣ್, ಜಗದೀಶ್, ರಾಮಚಂದ್ರ, ಕೋಮಲಾ, ನ್ಯಾಯಾಲಯ ಸಿಬ್ಬಂದಿ ಶ್ರೀನಾಥ್, ಸಂಧ್ಯಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT