ಭ್ರಷ್ಟಾಚಾರ ನಿಗ್ರಹ ದಳವು ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, ‘ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ಕಾಯ್ದೆ ಜಾರಿ ಮಾಡಿದ್ದು, ಇದನ್ನು ಅನುಷ್ಠಾನಗೊಳಿಸಲು ಎಲ್ಲರೂ ಸಹಕರಿಸಬೇಕು. ದೂರು ಕೊಡುವವರ ಹೆಸರು ಮತ್ತು ಮಾಹಿತಿ ಗೋಪ್ಯವಾಗಿಟ್ಟು ತಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದರು.